ಮುಳ್ಳಿನ ಮೇಲಿನ ಹೂವು: ವೇದಾ ಮನೋಹರ ಜೀವನ ಪಯಣದ ಕತೆ
ಈ ಹೋರಾಟಗಳಲ್ಲೆಲ್ಲಿಯೂ ನನಗೆ ಪಶ್ಚಾತ್ತಾಪವಿರಲಿಲ್ಲ. ಹಾಗೆ ನೋಡಿದರೆ ಇದು ನಾನೇ ಆಯ್ದುಕೊಂಡ ಬದುಕು. ನನ್ನ ಬದುಕನ್ನು ಅಪ್ಪ ಅಮ್ಮನ ಮಡಿಲಿಗೆ ಹಾಕಲಿಲ್ಲ. ಪ್ರೇಮಿಸಿ ಮದುವೆಯಾಗಿ ನನ್ನ ಹಾದಿಯನ್ನು ನಾನೇ ಕಂಡುಕೊಂಡೆ. ಮನೋಹರ್ ಅವರನ್ನು ಮದುವೆಯಾದ ಮೇಲೂ ಸಂಪೂರ್ಣವಾಗಿ ಅವರನ್ನು ಅವಲಂಬಿಸಕೂಡದು ಎಂಬ ತತ್ವ ನನ್ನದಿತ್ತು. ಅದಕ್ಕೆ ನೀರೆರೆದವರು ಮನೋಹರ್. ಅದೀಗ ಫಲ ಕೊಟ್ಟಿದೆ. ಯಾಕೆಂದರೆ ನಮ್ಮನ್ನು ನಾವು ನಂಬಿ ಮುನ್ನಡೆದಾಗ ಮಾತ್ರ ನಮಗೆ ಯಶಸ್ಸು ಸಿದ್ಧ ಎಂಬ ತತ್ವದಡಿ ಬದುಕಿದವಳು ನಾನು.
ಭಾರತಿ ಹೆಗಡೆ ನಿರೂಪಣೆಯ ವೇದಾ ಮನೋಹರ ಜೀವನ ಪಯಣದ ಕೃತಿ “ಪಂಚಮವೇದ”ದ ಒಂದು ಅಧ್ಯಾಯ ನಿಮ್ಮ ಓದಿಗೆ
“ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್” ಕಥೆಗಳು….
ಈ ಕಥೆಗಳ ಗಮನ ಸೆಳೆಯುವ ಇನ್ನೂ ಕೆಲವು ಅಂಶಗಳೆಂದರೆ, ನಾಟಕೀಯತೆ, ಕಥಾವರಣದಲ್ಲಿ ಬಿಚ್ಚಿಕೊಳ್ಳುವ ಒಂದು ಬಗೆಯ ನಿಗೂಢತೆ ಮತ್ತು ಜನಪ್ರಿಯ ಕಥನ ಪರಂಪರೆಯಿಂದ ಪಡೆದ ಪ್ರಭಾವ. ಬೆಳೆಯುತ್ತಿರುವ ಲೇಖಕನೊಬ್ಬನಿಗೆ ಯಾವ ಅಂಶವೂ ವರ್ಜ್ಯವಲ್ಲ. ಮಾತ್ರವಲ್ಲ, ತನ್ನ ಕಥನ ಸಾಮರ್ಥ್ಯವನ್ನು ಕಂಡುಕೊಳ್ಳಲು ನಡೆಸುವ ಪ್ರಯೋಗ ಕೂಡ ಮುಖ್ಯ. ಮುನವ್ವರ್ ಅಂತಹ ಕಂಡುಕೊಳ್ಳುವಿಕೆಯ ಪ್ರಯತ್ನದಲ್ಲಿದ್ದಾರೆ.
ಮುನವ್ವರ್ ಜೋಗಿಬೆಟ್ಟು ಕಥಾಸಂಕಲನ”ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್”ಗೆ ಕೇಶವ ಮಳಗಿ ಬರೆದ ಪ್ರವೇಶಿಕೆ
ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ
‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ
ಒಳದನಿಗೆ ಕಿವಿಯಾಗುವ ಕವಿತೆಗಳು: ಆನಂದ ವಿ. ಪಾಟೀಲ ಬರಹ
“ಮಹಾಶೂನ್ಯದ ಮಹಾಶೂನ್ಯತ್ವ ಮಹಾಸಾಗರದಲಿ/ಪ್ರತಿಯೊಬ್ಬರೂ ಒಂಟಿ!’ ಎನ್ನುವ ಅಖೈರು ಸತ್ಯ ಇಷ್ಟು ಬೇಗನೆ ಕೈಗೆ ಬಂತೆ ಅಚ್ಚರಿಯನ್ನುಂಟು ಮಾಡುತ್ತದೆ. ಬಹಳಷ್ಟು ಸಲ ಇಲ್ಲಿನ ಕವಿತೆ ಆಂತರ್ಯಕ್ಕೆ ಲಗ್ಗೆ ಇಟ್ಟುದೇ ಆಗಿದೆ ಅನ್ನಿಸಿತು. ಹಾಗಿರುವಾಗ ಅದು ಗುಂಗಾಗಿ ಕಾಡುತ್ತಿದೆಯಾ ಎಂತಲೂ ಗುಮಾನಿಯಾಗಿ ಕಾಡುವಂತೆ ಇಲ್ಲಿನ ಸಾಲುಗಳು ಕಾಣುತ್ತವೆ.
ಸುಮಿತ್ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಆನಂದ ವಿ. ಪಾಟೀಲ ಬರಹ
ಹಿಂದಣ ಹೆಜ್ಜೆಯ ಅರಿವಿನ ಹಣತೆಯಲ್ಲಿ…: ತೇಜಸ್ವಿನಿ ಹೆಗಡೆ ಬರಹ
ಆಗಿಹೋದ ದುರಂತಗಳು, ದೌರ್ಜನ್ಯಗಳು ಒಂದು ಎಚ್ಚರಿಕೆಯ ಗಂಟೆಯಾಗಬೇಕು. ಮಾನವೀಯತೆಯ ಮಹತ್ವವನ್ನು, ವಿಶಾಲ ಮನೋಭಾವದ ಸೌಂದರ್ಯವನ್ನು, ಮಹತ್ವವನ್ನು, ಜೀವನಧರ್ಮವನ್ನು ವರ್ತಮಾನಕ್ಕೆ ಮಾತ್ರವಲ್ಲ ಭವಿಷ್ಯಕ್ಕೂ ಒಂದು ಪಾಠವನ್ನು ಕೊಡುವಂತಿರಬೇಕು. ಇತಿಹಾಸದ ಅಧ್ಯಯನವು ನಮ್ಮ ಅರಿವಿನ ಹೆಚ್ಚಳಿಕೆ ಮತ್ತು ಪಾಠಕ್ಕೆ ಮಾಪನವಾಗಬೇಕೇ ಹೊರತು ನಾವಿಲ್ಲದಿದ್ದ ಕಾಲಘಟ್ಟದಲ್ಲಿ ಯಾರೋ ದಾಖಲಿಸಿರುವ ವಿಷಯಗಳಿಂದ ಉದ್ರಿಕ್ತರಾಗಿ, ಭಾವೋದ್ವೇಗವನ್ನು ಹೊಂದಿ ಶೋಕ ಸಾಗರದಲ್ಲಿ ಮುಳುಗಿಯೋ, ದ್ವೇಷದ ಉರಿಯಲ್ಲಿ ಬೆಂದೋ ಅಂಧತ್ವವನ್ನು ಹೊಂದಿದರೆ ಮತ್ತೆ ಅದೇ ಇತಿಹಾಸ ಮರುಕಳಿಸುವ ಸಾಧ್ಯತೆಯೇ ಹೆಚ್ಚು!
ನವೀನ್ ಗಂಗೋತ್ರಿ ಕಥಾಸಂಕಲನ “ಕಥಾಗತ”ದ ಕುರಿತು ತೇಜಸ್ವಿನಿ ಹೆಗಡೆ ಬರಹ
ಅಳಿಸಲಾಗದ ನೋವುಗಳು: ಅಶೋಕ ಪವಾರರ ಆತ್ಮಕತೆಯ ಪುಟಗಳು
ಅಪ್ಪ, ಧೋಂಡಿ ಮಾಮಾ ಮತ್ತು ಲಮಾಣಿಗಳು ಪೋಲೀಸರ ಕಾಲಿಗೆ ಬಿದ್ದರು. ‘‘ಸರಕಾರ„„ ಧಣ್ಯಾರ, ನಾವು ಕಳ್ಳತನ ಮಾಡಿಲ್ಲರಿ. ಬೇಕಾದರ ಯಾವ ದ್ಯಾವರ ಮುಂದೂ ಕರ್ಕೊಂಡ ಹೋಗರಿ. ನಮ್ಗ ಏನೂ ಗೊತ್ತಿಲ್ಲರಿ.’’ ಸಾಯೇಬ ಸೊಂಟದ ಬೆಲ್ಟ ಬಿಚ್ಚಿದ. ಧೋಂಡು ಮಾಮಾನ ಮುಕಳಿಗೆ ಎರಡು ಜಡಿದ. ಲಮಾಣ್ಯಾರ ಮುಕುಳಿ ಮ್ಯಾಲೂ ಒದ್ದರು. ಅವರು ಜೋರ-ಜೋರಾಗಿ ಬೊಬ್ಬಿ ಹೊಡೀತ ಕಾಲಿಗೆ ಬಿದ್ದರು. ಮುಂದ ಅಪ್ಪನ ಬೆನ್ನಿಗೂ ಜೋರಾಗಿ ಗುದ್ದಿದರು. ಅಪ್ಪ ತಲಿಗೆ ಚಕ್ಕರ ಬಂದ ಬಿದ್ದ.
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಅಶೋಕ ಪವಾರರ ಆತ್ಮಕತೆ “ಬಿಡಾರ”
ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ
ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ
ಸಫಲತೆಯ ಸಂದೇಶದ ಕವಿತೆಗಳು: ತೇಜ ಎಸ್. ಬಿ. ಬರಹ
ಅಕ್ಕ, ಜೋಗತಿ ಮಂಜಮ್ಮ, ಪದವಿ, ಅವ್ವ, ಮಗು, ಸಮಾನಳು ಮುಂತಾದ ಕವಿತೆಗಳು ಜೀವ-ಭಾವ ತುಂಬಿ ಮಹಿಳೆಯರ ಜೀವನದ ಬಗ್ಗೆ ಚಿತ್ರಿಸಿವೆ. ಮುಂತಾಗಿ ನನಗಾರು ಸಾಟಿ, ತಮಟೆ, ಕಣ್ಣಾಮುಚ್ಚೆ ಕಾಡೆ ‘ಗೋಡೆ’ ಬೆಂಗಳೂರಿನ ಮಗ ಸಂಭಾಷಣೆಯೇ ಇಲ್ಲದಂತೆ ಕಾಡುವುದಂತೂ ಸಹಜ. ಪುಸ್ತಕ ಓದಲು ಹೆಚ್ಚೇನು ಸಮಯ ತೆಗೆದುಕೊಳ್ಳಲಿಲ್ಲ, ಆದರೆ ಅವು ನಮ್ಮಲ್ಲಿ ಹುಟ್ಟುಹಾಕಿದ ಪ್ರಶ್ನೆಗಳನ್ನು, ಭಾವಗಳನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ಬೇಕಾಯಿತು…
ವಿಕ್ರಮ್ ಬಿ.ಕೆ. ಕವನ ಸಂಕಲನ “ನಾವಿಬ್ಬರೇ ಗುಬ್ಬಿ” ಕುರಿತು ತೇಜ ಎಸ್. ಬಿ. ಬರಹ
“ಸಾವಿನ ದಶಾವತಾರ”: ಡಾ. ಸುಧಾ ಬರಹ
ಎಲ್ಲಿಂದಲೋ ಬಂದ ಅಪರಿಚಿತನೊಬ್ಬ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು.. ತಾವು ಬೇರೆ ಬೇರೆ ಜಾತಿಗೆ ಸೇರಿದ್ದರಿಂದ ಕುಟುಂಬದವರಿಂದ ವಿವಾಹಕ್ಕೆ ಬಂದ ತೀವ್ರ ಪ್ರತಿರೋಧಕ್ಕೆ ನೊಂದು ಜೀವನಕ್ಕೇ ಅಂತ್ಯ ಹಾಡಿದ ಪ್ರೇಮಿಗಳು-ಇನ್ನೇನು ವಿವಾಹಕ್ಕೆ ತಯಾರಾದವರಂತೆ ಸಾಲಂಕೃತರಾಗಿ ಒಬ್ಬರನ್ನೊಬ್ಬರು ಆಲಂಗಿಸಿಕೊಂಡ ಭಂಗಿಯಲ್ಲಿದ್ದ ಅವರ ಮೃತ ದೇಹಗಳು-ದೂರದಲ್ಲಿದ್ದು ವೀಕ್ಷಕರಂತೆ ನೋಡಲೂ ಕಷ್ಟವಾದ ಈ ಸಾವುಗಳಿಗೆ ಅಂತ್ಯ ಸಂಸ್ಕಾರದ ಸಿದ್ಧತೆ ಮಾಡುವುದು ಹತಾಶೆಯ ಪರಮಾವಧಿಯಲ್ಲದೆ ಇನ್ನೇನು ಎಂದು ಅಲವತ್ತುಕೊಳ್ಳುತ್ತಾನೆ ನಮ್ಮ ನಿರೂಪಕ.
ಕೆ. ಸತ್ಯನಾರಾಯಣ ಬರೆದ `ಸಾವಿನ ದಶಾವತಾರ’ ಕಾದಂಬರಿಯ ಕುರಿತು ಡಾ. ಸುಧಾ ಬರಹ









