ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ
ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು.
ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ
ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ
ಉಳಿದವರೆಲ್ಲ ಐದು ಪೈಸೆಗೆ ಒಂದರಂತೆ ಮಾರುತ್ತಿದ್ದರೆ, ನಾ ಮಾತ್ರ ‘ಆಣೆಗೊಂದ್ ಮಾಲೆ, ಯಾರಿಗ್ ಬೇಕು ತಗೊಳ್ರಿ, ತಗೊಳ್ರಿ ಆಣೆಗೊಂದ್’ ಎಂದು ವ್ಯಾಪಾರಕ್ಕಿಳಿಯುತ್ತಿದ್ದೆ. ‘ಅಲಾ ಅವ್ರ್ದೆಲ್ಲ ಬರೇ ಐದ್ ಪೈಸಾ. ನಿಂದೇನವ್ವಾ ಒಂದಾಣೆ?’ ಎಂದು ಕೇಳಿದ ಊರಿನವರಿಗೆಲ್ಲ, ‘ಹದಿನೇಳರಿಂದ ಇಪ್ಪತ್ತು ಸೇವಂತಿಗೆ ಹೂ, ಮಧ್ಯದಲ್ಲಿ ಬ್ಯಾಗಡಿ ನೋಡ್ರಿ, ಎಷ್ಟುದ್ದ ಐತಿ! ಒಂದು ಪೈಸೆ ಹೆಚ್ ಕೊಡ್ಬೇಕೊ ಬೇಡ್ವೋ?’ ಎನ್ನುತ್ತಿದ್ದೆ. ಕೇಳಿದವರು ಮಾಲೆಯನ್ನು ಕೊಂಡು, ಹುಡುಗಿ ಬಹಳ ಚುರುಕಿದ್ದಾಳೆಂದು ಶಭಾಸ್ಗಿರಿ ಕೊಡುತ್ತಿದ್ದರೆ, ಅಕ್ಕಪಕ್ಕದಲ್ಲಿದ್ದ ವ್ಯಾಪಾರಸ್ಥರು, ‘ಈಕಿ ಒಬ್ಬಾಕಿನೇನೊ ಜಾತ್ರಿಗ್ ಗೌರಿ!’ ಎಂದು ಮೂಗುಮುರಿಯುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ
ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ
ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ
ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ
ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ
ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ
ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ
ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…
ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ
ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್ ಗುಡಾಲ್ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ ನಿಮ್ಮ ಓದಿಗೆ
ನಮ್ಮನೆಯ ದೀಪಾವಳಿ…: ರೂಪಶ್ರೀ ಕಲ್ಲಿಗನೂರ್ ಬರಹ
ಕನಿಷ್ಟ ಎರಡು ವಾರಗಳ ಹಿಂದಿನಿಂದ ಕೆಲಸ ಆರಂಭಿಸಿರುತ್ತಿದ್ದ ಅಮ್ಮ, ದೀಪಾವಳಿ ಬಟ್ಟೆ ಶಾಪಿಂಗಿಗೆ ಬಂದಿದ್ದು ಕಡಿಮೆಯೇ. ಅಕ್ಕ-ನಾನು ಆಯ್ದ ಬಟ್ಟೆಗಳು ಅವರಿಗೆ ಯಾವಾಗಲೂ ಖುಷಿಯೇ. ಹಾಗಾಗಿ ನೀವೇ ಆರಿಸಿತಂದುಬಿಡಿ ಅಂತ ನಮ್ಮೆಲ್ಲರನ್ನೂ ಕಳಿಸಿಬಿಡುತ್ತಿದ್ದರು. ಹಾಗಾಗಿ ನಮ್ಮದೆಲ್ಲ ಬಟ್ಟೆ ಕೊಂಡಾದ ಮೇಲೆ, ಅಮ್ಮನಿಗೆಂದು ಚಂದದ ಸೀರೆ ಆರಿಸುವ ಜವಾಬ್ದಾರಿ ನಮ್ಮಗಳ ಮೇಲಿರುತ್ತಿತ್ತು. ಅಪ್ಪನೂ, ನಾವೂ ಎಲ್ಲರೂ ಸೇರಿ ಅಮ್ಮನಿಗೆ ಒಪ್ಪಬಹುದಾದ ಸೀರೆಯನ್ನು ಬಹಳ ಕುತೂಹಲದಿಂದ ಆರಿಸುತ್ತಿದ್ದೆವು. ದೀಪಾವಳಿಯ ಆಚರಣೆಯ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ
ದೀಪಾವಳಿ ಹಬ್ಬದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಬರಹ
ಅಂತೂ ಈಡಿಗೆ ಬೆಂಕಿ ತಾಕಿಸಿ ಅದು ಉರಿಯುವುದರೊಳಗೆ ನನ್ನನ್ನು ಅಲ್ಲಿಂದ ಮನೆಗೆ ಕಳಿಸಿದ್ದರು. ಅದಾದ ಮೇಲೆ ಎಂದೂ ನಾನು ಬಾನ ಹೊತ್ತಿದ್ದು ನೆನಪಿಲ್ಲ. ನನಗೆ ದೇವರನ್ನು ಹೊತ್ಕೋಬೇಕು ಅಂತ ಆಸೆ ಇತ್ತು. ಆದರೆ ನಾವು ದೇವರನ್ನು ತಲೆಮೇಲೆ ಹೊರಬಾರ್ದು ಅನ್ನುತ್ತಿದ್ದರು. ಅದಕ್ಕೆ ಅನೇಕ ನಿಯಮಗಳಿರುತ್ತವೆ ಅನ್ನುತ್ತಿದ್ದರು. ನಾವ್ಯಾಕೆ ಹೊತ್ಕೋಬಾರ್ದು ಎಂಬ ಪ್ರಶ್ನೆ ನನ್ನನ್ನು ಕಾಡುತ್ತಲೆ ಇತ್ತು. ಅಂತೂ ಆ ವರ್ಷದ ದೀವಣ್ಗೆ ಹಬ್ಬ ಮುಗಿದುಹೋಗಿತ್ತು. ಪ್ರತಿ ದೀಪಾವಳಿ ಹಬ್ಬದಲ್ಲೂ ಅಂತಹ ನೆನಪುಗಳು ಮತ್ತೆ ಮತ್ತೆ ಮರುಕಳಿಸುತ್ತಲೆ ಇರುತ್ತವೆ.
ಮಾರುತಿ ಗೋಪಿಕುಂಟೆ ನೆನಪುಗಳು









