Advertisement
ಭವ್ಯ ಟಿ.ಎಸ್.

ಭವ್ಯ ಟಿ.ಎಸ್. ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಕಾನುಗೋಡಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕತೆ, ಕವಿತೆ, ಲೇಖನಗಳನ್ನು ಬರೆಯುವುದು ಹವ್ಯಾಸ. ಹಲವು ಪ್ರಮುಖ ಪತ್ರಿಕೆಗಳು ಹಾಗೂ ವೆಬ್ ಮ್ಯಾಗಜೀನ್‌ಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ. "ವಸುಂಧರೆ" ಇವರ ಪ್ರಕಟಿತ ಚೊಚ್ಚಲ ಕವನ ಸಂಕಲನ.

ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಮಳೆ ಜಿನುಗಿಗೆ ಅರಳುವ ಜೀವನಪ್ರೀತಿ: ಭವ್ಯ ಟಿ.ಎಸ್. ಸರಣಿ

ಮಳೆಗಾಲ ಮಲೆನಾಡಿನ ವಸುಂಧರೆಯನ್ನು ಸಿಂಗರಿಸಿದೆ. ಮಂಜು ಆವರಿಸಿದ ಬೆಟ್ಟ ಗುಡ್ಡಗಳು, ಮಳೆಯಲ್ಲಿ ಮಾತ್ರ ಗೋಚರಿಸುವ ಸೀತಾಳೆಯಂತಹ ವನಸುಮಗಳು, ಬಗೆಬಗೆಯ ಅಣಬೆಗಳು, ದಾರಿಯುದ್ದಕ್ಕೂ ಮನಸೆಳೆಯುವ ಸಣ್ಣ ಸಣ್ಣ ಜಲಪಾತಗಳು, ತುಂಬಿ ಹರಿಯುವ ನದಿ ತೊರೆಗಳು ಮಲೆನಾಡನ್ನು ಭೂ ಲೋಕ ಸ್ವರ್ಗವಾಗಿಸಿವೆ. ದೂರದೂರುಗಳಿಂದ ಪ್ರವಾಸಿಗರು ಮಳೆಗಾಲದಲ್ಲಿ ಮಲೆನಾಡಿನ ದೃಶ್ಯ ವೈಭವ ಸವಿಯಲು ಬರುತ್ತಿದ್ದಾರೆ. ಅನೇಕ ರೆಸಾರ್ಟ್‌ಗಳು, ಹೋಂ ಸ್ಟೇಗಳು ತಲೆಎತ್ತಿವೆ. ಮಲೆನಾಡು ತನ್ನ ಮೊದಲ ನೀರವ, ನಿರ್ಜನ ಭವ್ಯತೆಯನ್ನು ಕಳೆದುಕೊಳ್ಳುವ ಭೀತಿಯೂ ಇದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಪ್ರಕೃತಿಯೇ ದೈವವೆನ್ನುವ ದೈಯ್ಯದ ಹರಕೆ: ಭವ್ಯ ಟಿ.ಎಸ್. ಸರಣಿ

ರಮಣೀಯವಾದ ಹಚ್ಚಹಸಿರಿನ ಮಲೆನಾಡಿನ ಒಂಟಿ ಮನೆಗಳ ಅಕ್ಕಪಕ್ಕದ ದರುಗು ಗುಡಿಸುವ ಹಡ್ಡೆಗಳ ಬನದೊಳಗೆ ಇರುವ ಮರದ ಬುಡಗಳೇ ಈ ದೈಯ್ಯಗಳ ಆವಾಸಸ್ಥಾನ. ಪ್ರಕೃತಿ, ಮರ-ಗಿಡಗಳಲ್ಲಿ ದೈವತ್ವವನ್ನು ಕಾಣುವ ಮಲೆಯ ಜನರ ಭಕ್ತಿ, ಶ್ರದ್ಧೆಗಳಿಗೆ ಈ ದೈಯ್ಯಗಳು ಪಾತ್ರವಾಗಿವೆ. ದೈಯ್ಯದ ಮರಗಳೆಂಬ ಭಯ, ಭಕ್ತಿಯಿಂದ ಈ ಮರಗಳನ್ನು ಯಾರೂ ಕಡಿಯುವುದಿಲ್ಲ. ಇದರಿಂದ ಪ್ರಕೃತಿಯ ಸಂರಕ್ಷಣೆಯೂ ಆಗುತ್ತಿದೆ. ಊರು ತೊರೆದು ಬೇರೆ ಬೇರೆ ಊರಿಗೆ ಹೋಗಿ ನೆಲೆಸಿರುವ ಜನರು ಪುನಃ ಊರಿಗೆ ಬರುವುದು, ಬಂಧು ಬಾಂಧವರೊಡನೆ ಬೆರೆಯಲು ಇದೊಂದು ಸುದಿನ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ದೇವರ ಹರಕೆ ಸಲ್ಲಿಸುವುದರ ಕುರಿತ ಬರಹ ನಿಮ್ಮ ಓದಿಗೆ

Read More

ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ

ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಮಳೆ ತಂದ ನೆನಪಿನ ಚಿತ್ರಮಾಲೆ!!: ಭವ್ಯ ಟಿ.ಎಸ್. ಸರಣಿ

ಶಾಲೆಗೆ ಹೋದೊಡನೆ ನಮ್ಮ ಕೊಪ್ಪೆ ತೆಗೆದು, ತೊಯ್ದು ತೊಪ್ಪೆಯಾದ ಯೂನಿಫಾರಂ ಲಂಗಗಳನ್ನು ಹಿಂಡಿ ಕೊಡವಿಕೊಂಡು ಹೋಗಿ ತರಗತಿಯಲ್ಲಿ ಕೂರುತ್ತಿದ್ದೆವು. ಇಡೀ ದಿನ ಸುತ್ತೆಲ್ಲ ಬಟ್ಟೆಯ ಹಸಿವಾಸನೆ ಹರಡಿರುತ್ತಿತ್ತು. ಜೋರಾಗಿ ಮಳೆ ಬರುವಾಗ ಮೇಷ್ಟ್ರು ಪಾಠ ಮಾಡುತ್ತಿರುವಾಗಲೂ ಗಲಾಟೆ ಮಾಡುತ್ತಿದ್ದೆವು. ಇನ್ನೂ ಶಿಕ್ಷಕರು ಬರದ ತರಗತಿಯಲ್ಲಿ ‌ಮಳೆ ಸುರಿಯುವಾಗ ಮನಸೋ ಇಚ್ಛೆ ಕೂಗುತ್ತ ಮಳೆಯೊಂದಿಗೆ ಜುಗಲ್ ಬಂಧಿ ನಡೆಸುತ್ತಿದ್ದೆವು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆದಿನಗಳಲ್ಲಿ ಶಾಲಾಮಕ್ಕಳ ಸಂಭ್ರಮದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ