Advertisement
ಡಾ. ಎಲ್.ಜಿ. ಮೀರಾ

ಡಾ.ಎಲ್.ಜಿ.ಮೀರಾ ಮೂಲತಃ ಕೊಡಗಿನವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮಿಳ್ ಕಾವ್ಯ ಮೀಮಾಂಸೆ, ಮಾನುಷಿಯ ಮಾತು (1996), ಬಹುಮುಖ (1998), ಸ್ತ್ರೀ ಸಂವೇದನೆಯಲ್ಲಿ ಕನ್ನಡ ಕಥನ ಸಂಶೋಧನೆ (ಮಹಾಪ್ರಬಂಧ) (2004), ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆ (ಸಂಪಾದನೆ) (2006), ಆಕಾಶಮಲ್ಲಿಗೆಯ ಘಮ ಎಂಬ ಸಣ್ಣಕತೆಯನ್ನು, ರಂಗಶಾಲೆ  ಎಂಬ ಮಕ್ಕಳ ನಾಟಕವನ್ನು, ಕೆಂಪು ಬಲೂನು ಇತರೆ ಶಿಶುಗೀತೆಗಳು, ಕಲೇಸಂ ಪ್ರಕಟಣೆಯ ನಮ್ಮ ಬದುಕು ನಮ್ಮ ಬರಹದಲ್ಲಿ ಆತ್ಮಕತೆ ರಚಿಸಿದ್ದಾರೆ.

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ

ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ

ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ