Advertisement
ಡಾ. ಎಲ್.ಜಿ. ಮೀರಾ

ಡಾ.ಎಲ್.ಜಿ.ಮೀರಾ ಮೂಲತಃ ಕೊಡಗಿನವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮಿಳ್ ಕಾವ್ಯ ಮೀಮಾಂಸೆ, ಮಾನುಷಿಯ ಮಾತು (1996), ಬಹುಮುಖ (1998), ಸ್ತ್ರೀ ಸಂವೇದನೆಯಲ್ಲಿ ಕನ್ನಡ ಕಥನ ಸಂಶೋಧನೆ (ಮಹಾಪ್ರಬಂಧ) (2004), ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆ (ಸಂಪಾದನೆ) (2006), ಆಕಾಶಮಲ್ಲಿಗೆಯ ಘಮ ಎಂಬ ಸಣ್ಣಕತೆಯನ್ನು, ರಂಗಶಾಲೆ  ಎಂಬ ಮಕ್ಕಳ ನಾಟಕವನ್ನು, ಕೆಂಪು ಬಲೂನು ಇತರೆ ಶಿಶುಗೀತೆಗಳು, ಕಲೇಸಂ ಪ್ರಕಟಣೆಯ ನಮ್ಮ ಬದುಕು ನಮ್ಮ ಬರಹದಲ್ಲಿ ಆತ್ಮಕತೆ ರಚಿಸಿದ್ದಾರೆ.

ಮಾಡೆಲಿಂಗ್ ಕ್ಷೇತ್ರದೆಡೆಗೆ ಒಂದು ಸ್ತ್ರೀನೋಟ: ಡಾ.ಎಲ್.ಜಿ.ಮೀರಾ ಅಂಕಣ

ಶೇವಿಂಗ್ ಬ್ಲೇಡ್‌ನಿಂದ ಹಿಡಿದು ದುಬಾರಿ ಕಾರುಗಳ ತನಕ ನೂರಾರು ಉತ್ಪನ್ನಗಳ ಮಾರಾಟಕ್ಕೆ ಹೆಣ್ಣಿನ `ಸುಂದರ’ ದೇಹದ ಪ್ರದರ್ಶನ ಅನಿವಾರ್ಯವಾಗಿಬಿಟ್ಟಿದೆ. ಈ ನಡುವೆ ಜಾಹೀರಾತುಗಳು ವಿದ್ಯಾವಂತ ಹಾಗೂ ತನ್ನ ವೃತ್ತಿಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಸ್ತ್ರೀಯನ್ನು ಆಗೀಗ ತೋರಿಸುತ್ತವಾದರೂ ಸೌಂದರ್ಯದ ಸೀಮಿತ ಕಲ್ಪನೆಯನ್ನೇ ಇವು ಮುಂದು ಮಾಡುತ್ತವೆ ಎಂಬುದು ಸತ್ಯ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಏಳನೆಯ ಬರಹ

Read More

ಹೆಣ್ಣ ಕಣ್ಣಿನ ನೋಟದಿಂದ ಕಲಾ ಚಿಂತನೆ: ಎಲ್.ಜಿ.ಮೀರಾ ಅಂಕಣ

ದೇವದಾಸಿ ಪದ್ಧತಿಗೂ ತಮಿಳುನಾಡು ಮತ್ತು ಕರ್ನಾಟಕಗಳ ಶಾಸ್ತ್ರೀಯ ನೃತ್ಯಕಲೆಯಾದ ಭರತನಾಟ್ಯಕ್ಕೂ ಇರುವ ಸಂಬಂಧವನ್ನು ನೋಡುವಾಗ ಈ ಮಾತು ಸ್ಪಷ್ಟವಾಗುತ್ತದೆ. ರಂಗಭೋಗ, ಅಂಗಭೋಗಗಳಿಗಾಗಿ ದೇವದಾಸಿಯರನ್ನು ಬಳಸಿಕೊಳ್ಳುವುದು, ಹಾಡು ಕುಣಿತಗಳನ್ನು ದೇವದಾಸಿಯರಿಗೆ, ಕಲಾವಂತೆಯರಿಗೆ, ಪಾತರವದವರಿಗೆ ಸೀಮಿತವಾದ ವಿಷಯವೆಂಬಂತೆ ನೋಡುವುದು 19ನೇ ಶತಮಾನಕ್ಕಿಂತ ಮುಂಚೆ ನಮ್ಮ ಸಮಾಜದಲ್ಲಿ ಒಪ್ಪಿತವಾದ ವಿಷಯವೇ ಆಗಿತ್ತು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಆರನೆಯ ಬರಹ

Read More

ಯಲ್ಲಮ್ಮ ಮತ್ತು ಮೀರಮ್ಮ…. ಏನೀ ಬಂಧ… ಅನುಬಂಧ…..!: ಎಲ್.ಜಿ.ಮೀರಾ ಅಂಕಣ

ಕಾಗುಣಿತ, ಎರಡು ಅಕ್ಷರದ ಪದ, ಮೂರು ಅಕ್ಷರದ ಪದ, ಚಿಕ್ಕ ಚಿಕ್ಕ ವಾಕ್ಯ ….. ಹೀಗೆ ಮುಂದುವರಿಯಿತು ಪಾಠ. ಈಗಲೂ ವಿಘ್ನಗಳು ಬರುತ್ತಿದ್ದವು. ಆದರೆ ಅದರ ನಡುವೆಯೂ ಯಲ್ಲಮ್ಮ ಒದು, ಬರಹ ಮುಂದುವರಿಸಿದರು. ಸಾವಿರ ರೂಪಾಯಿ ಕರಾರು ನನಗೂ ತುಸು ಧೈರ್ಯ ಕೊಡುತ್ತಿತ್ತು. ನಾನು ಅಲ್ಪ ಪ್ರಾಣ, ಮಹಾ ಪ್ರಾಣ, ಒತ್ತು, ದೀರ್ಘ, ಉಚ್ಚಾರ, ಉಕ್ತ ಲೇಖನ ಅಂತ ತಲೆ ತಿನ್ನುತ್ತಿದ್ದರೆ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐದನೆಯ ಬರಹ

Read More

ಕನ್ನಡ ಭಾಷೆಗೆ ಗೆಜ್ಜೆಯ ದಾರಿ… ಭಾವನೃತ್ಯದ ಸುಂದರ ಪರಿ: ಎಲ್.ಜಿ.ಮೀರಾ ಅಂಕಣ

ಭಾವಗೀತೆಯು ಕನ್ನಡ ನವೋದಯ ಸಾಹಿತ್ಯದ(1870-1940) ಸಂದರ್ಭದಲ್ಲಿ ಹುಟ್ಟಿತಲ್ಲವೇ. ಆ ಕಲಾಪ್ರಕಾರವು ಅನೇಕ ಕವಿಗಳ ಸಾಹಿತ್ಯವನ್ನು ಗೀತೆಗಳ ಮೂಲಕ, ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯಕ್ಷೇತ್ರದ ಆಚೆಗಿನ ದೊಡ್ಡ, ಅದರಲ್ಲೂ ಅನಕ್ಷರಸ್ಥ ಜನಸಮುದಾಯಕ್ಕೂ ತಲುಪಿಸುವ ಕೆಲಸ ಮಾಡಿತು. ನಮ್ಮ ಸಂಸ್ಕೃತಿಯು ಸಾಹಿತ್ಯಪ್ರಸರಣದಲ್ಲಿ ಭಾವಗೀತೆಯನ್ನು ದುಡಿಸಿಕೊಂಡಂತೆ ಭಾವನೃತ್ಯವನ್ನು ಸಹ ದುಡಿಸಿಕೊಳ್ಳಬಹುದು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಗೂಗಲ್ ಜಮಾನಾದಲ್ಲಿ ಗುರು ಯಾರು..!: ಡಾ. ಎಲ್.ಜಿ. ಮೀರಾ ಅಂಕಣ

ಏನು ಕಲಿಯಬೇಕು ಎಂಬುದನ್ನು ಮಾತ್ರವಲ್ಲ ಅದನ್ನು ಏಕೆ ಮತ್ತು ಹೇಗೆ ಕಲಿಯಬೇಕು ಎಂಬುದನ್ನು ಕೂಡ ವಿದ್ಯಾರ್ಥಿಗಳಿಗೆ ಕಲಿಸಬಲ್ಲರು. ತಾವು ಕಲಿಸುತ್ತಿರುವ ಇಂಗ್ಲಿಷ್, ವಿಜ್ಞಾನ ಅಥವಾ ಸಮಾಜ ಪಾಠವು ತಾವು ಹೇಳುತ್ತಿರುವ ಭಾಷೆಯಲ್ಲಿ ಮಕ್ಕಳಿಗೆ ಅರ್ಥ ಆಗುತ್ತಿಲ್ಲ ಎಂದು ಅನ್ನಿಸಿದಾಗ ತಕ್ಷಣ ಅದನ್ನು ಮಕ್ಕಳ ಮಾತೃಭಾಷೆಯಲ್ಲಿ ಹೇಳಿ ಮಕ್ಕಳಿಗೆ ಅದನ್ನು ತಲುಪಿಸಬಲ್ಲರು. ಶಿಕ್ಷಕ ಅಂದರೆ ಎರಡನೆಯ ಪೋಷಕ ಎಂಬ ಮಾತಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂರನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ