Advertisement
ಡಾ. ಎಲ್.ಜಿ. ಮೀರಾ

ಡಾ.ಎಲ್.ಜಿ.ಮೀರಾ ಮೂಲತಃ ಕೊಡಗಿನವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮಿಳ್ ಕಾವ್ಯ ಮೀಮಾಂಸೆ, ಮಾನುಷಿಯ ಮಾತು (1996), ಬಹುಮುಖ (1998), ಸ್ತ್ರೀ ಸಂವೇದನೆಯಲ್ಲಿ ಕನ್ನಡ ಕಥನ ಸಂಶೋಧನೆ (ಮಹಾಪ್ರಬಂಧ) (2004), ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆ (ಸಂಪಾದನೆ) (2006), ಆಕಾಶಮಲ್ಲಿಗೆಯ ಘಮ ಎಂಬ ಸಣ್ಣಕತೆಯನ್ನು, ರಂಗಶಾಲೆ  ಎಂಬ ಮಕ್ಕಳ ನಾಟಕವನ್ನು, ಕೆಂಪು ಬಲೂನು ಇತರೆ ಶಿಶುಗೀತೆಗಳು, ಕಲೇಸಂ ಪ್ರಕಟಣೆಯ ನಮ್ಮ ಬದುಕು ನಮ್ಮ ಬರಹದಲ್ಲಿ ಆತ್ಮಕತೆ ರಚಿಸಿದ್ದಾರೆ.

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

Read More

ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ

ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”

Read More

ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ

ಮನೆಯಲ್ಲಿನ ಹೆಂಡತಿಯ ಮೇಲೆ ಮುನಿದಿದ್ದ ಮಾಮ ತನಗೆ ಇನ್ನೊಂದು ಮದುವೆ ಮಾಡಬೇಕೆಂದು ತನ್ನ ಹೆಂಡತಿಯನ್ನೇ ಬಲವಂತಿಸಿದ, ನಿರ್ಮಲತ್ತೆಯ ವಿದ್ಯಾರ್ಥಿನಿಯೊಬ್ಬರನ್ನು ಮದುವೆಯಾದ ಕೂಡ. ಅದೂ ಸರಿ ಹೋಗದೆ ಮೂರನೇ ಮದುವೆಯನ್ನೂ ಆಗಿ ಅವಳಿಗೆ ಒಂದು ಮಗುವನ್ನು ಕರುಣಿಸಿದ.
ಡಾ. ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ “ಪರದೇಸಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸಂಜೆಗಣ್ಣಿನ ಚೆಲುವು : ಎಲ್.ಜಿ.ಮೀರಾ ಲಲಿತ ಪ್ರಬಂಧ

ಮೂರು ವರ್ಷ ಮುಗಿಯುತ್ತಿದ್ದಂತೆ ಮಂತ್ರಿಗಳು ಅವನ ಬಳಿ ಬಂದು “ನಾಳೆ ನಿಮ್ಮನ್ನು ಕಾಡಿಗೆ ಒಯ್ದು ಬಿಡುತ್ತೇವೆ, ತಯಾರಾಗಿರಿ” ಎಂದಾಗ ಅವನು ಸ್ವಲ್ಪವೂ ವಿಚಲಿತನಾಗದೆ ಒಪ್ಪಿಕೊಳ್ಳುತ್ತಾನೆ. ಮಾರನೆಯ ದಿನ ಅವನಿಗೆ ಇಷ್ಟವಾದ ಊಟತಿಂಡಿಗಳನ್ನು ಕೊಟ್ಟು ಊರಿನ ಪಕ್ಕದಲ್ಲಿದ್ದ ನದಿಯನ್ನು ದೋಣಿಯಲ್ಲಿ ದಾಟಿಸಿ ಅವನನ್ನು ಕಾಡಿಗೆ ಬಿಡಲು ಹೋದವರಿಗೆ ಒಂದು ಅಚ್ಚರಿ ಕಾದಿರುತ್ತದೆ. ಕೆಲವೇ ವರ್ಷಗಳ ಹಿಂದೆ ಗೊಂಡಾರಣ್ಯವಾಗಿದ್ದದ್ದು ಈಗ ನಾಡಾಗಿರುತ್ತದೆ!
ವೃದ್ಧಾಪ್ಯದ ದಿನಗಳ ಕುರಿತು ಡಾ. ಎಲ್.ಜಿ. ಮೀರಾ ಲಲಿತ ಪ್ರಬಂಧ

Read More

ಸರ್ವಶಕ್ತ ಮಹಿಳೆಯಲ್ಲ ನಾನು, ನಿಜ ಮಹಿಳೆ: ಎಲ್.ಜಿ.ಮೀರಾ ಬರಹ

ಉದ್ಯೋಗಸ್ಥ ಮಹಿಳೆಯ ಅಪರಾಧಿ ಪ್ರಜ್ಞೆಯು ಸಹ ಗಂಡಾಳಿಕೆಯ ಸಮಾಜವು ನಿರ್ಮಿಸಿದ್ದೇ ಆಗಿರುತ್ತೆ. ಸ್ತ್ರೀವಾದದ ಮಾತೃಚಿಂತಕಿಯರಲ್ಲೊಬ್ಬರಾದ ವರ್ಜೀನಿಯಾ ವೂಲ್ಫ್ ಹೇಳುವ ಗೃಹದೇವತೆಯ ಬಿಂಬ ನೆನಪಾಗುತ್ತೆ. `ಮನೆಕೆಲಸ, ಮನೆವಾಳ್ತೆ ಎಂದರೆ ಅದು ಹೆಣ್ಣಿನ ಜವಾಬ್ದಾರಿ ಮಾತ್ರ’ ಎಂದು ತಿಳಿದಿದ್ದ ಪರಿಸರದಲ್ಲಿ ಬೆಳೆದ ಹೆಂಗಸರಲ್ಲಿ, `ಮನೆಕೆಲಸವನ್ನು ಸರಿಯಾಗಿ ಮಾಡದಿರುವ ಬಗ್ಗೆ’ ಒಂದು ಅಪರಾಧಿ ಪ್ರಜ್ಞೆ ಇರುತ್ತದೆ. ಅವರ ಸುಪ್ತ ಮನಸ್ಸಿನಲ್ಲಿ ಅದು ಸೇರಿ ಹೋಗಿರುತ್ತದೇನೋ!
ಉದ್ಯೋಗಸ್ಥ ಮಹಿಳೆಯರು ಮನೆ-ಉದ್ಯೋಗ ಸಂಭಾಳಿಸುವುದರ ಕುರಿತು ಡಾ. ಎಲ್. ಜಿ. ಮೀರಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ