Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಮನೆ ಮತ್ತು ಮನದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಇಲ್ಲಿ ಕನ್ನಡಕ್ಕೆ ಅನುವಾದಿಸಿರುವ ದಿತಿ ರೋನೆನ್‌ರ ಕವನಗಳಲ್ಲಿ ಅವರ ಎಲ್ಲಾ ಆಸ್ಥೆಗಳ, ನಂಬಿಕೆಗಳ, ಕಾಳಜಿಗಳ ಉದಾಹರಣೆಗಳನ್ನು ಕಾಣಬಹುದು. ಹಿಟ್ಲರ್‌ನ ಕಾಲದ ಜರ್ಮನಿ ಯಹೂದಿಗಳ ವಿರುದ್ಧ ನಡೆಸಿದ ಹತ್ಯಾಕಾಂಡದ ನೆನಪುಗಳು ಗಾಯಗಳು ಎಂದೂ ಮರೆಯಾಗಲ್ಲ. ಈ ಹತ್ಯಾಕಾಂಡದಿಂದ ಬದುಕುಳಿದವರ ಮಗಳಾಗಿ ದಿತಿ ರೋನೆನ್‌ ಅವರು ಇದರ ಬಗ್ಗೆ ಬಹು ಮಾರ್ಮಿಕವಾಗಿ ಬರೆಯುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಲೇಬರ್‌ ಕ್ಯಾಂಪಿನಲ್ಲಿ ಹುಟ್ಟಿದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಅವರ ದೇಶದ ಮೇಲಿನ ಪ್ರೀತಿ ಅವರಲ್ಲಿ ಆಳವಾಗಿ ಬೇರೂರಿತ್ತಾದರೂ, ಅದು ಡಾಂಭಿಕತೆಯ ಪ್ರೀತಿ ಅಥವಾ ವಾಗಾಡಂಬರವಾಗಿರಲಿಲ್ಲ; ಬದಲಿಗೆ ಶಾಂತತೆಯಿಂದ ಕೂಡಿತ್ತು ಹಾಗೂ ವೈಯಕ್ತಿಕವಾಗಿತ್ತು. ಅವರ ಲೇಬರ್ ಕ್ಯಾಂಪಿನ ನಂತರದ ಕವಿತೆಗಳಲ್ಲಿ ಮೂಲಭೂತ ಮಾನವ ಸ್ಥಿತಿ ಮತ್ತದರ ಅಮಿತ ಕಷ್ಟಗಳು ಪ್ರಧಾನ ವಿಷಯಗಳಾಗಿವೆ. ಪ್ರಕೃತಿವಸ್ತುಗಳಿಂದ ತುಂಬಿದ ಸಾಂಕೇತಿಕತೆಯನ್ನು ತೋರಿಸುತ್ತಾ ಅವರು ತನ್ನ ಪ್ರೀತಿಯ ಪರಿಸರವನ್ನು, ದೇಶ, ಮತ್ತು ಅದರ ಜನರನ್ನು ಮೀರಿ ನಿಂತು ಸಾರ್ವತ್ರಿಕ ಕವಿಯಾಗುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಎಸ್. ಜಯಶ್ರೀನಿವಾಸ ರಾವ್ ಬರೆಯುವ ಹೊಸ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ

ಗೊಂದಲಮಯ ದ್ವಂದ್ವಾರ್ಥತೆಗಳು ಮತ್ತು ದೃಷ್ಟಿಕೋನದ ಕ್ಷಿಪ್ರ ಬದಲಾವಣೆಗಳನ್ನೊಳಗೊಂಡ ವೀಡಿಂಗ್-ರ ವಿಕೇಂದ್ರಿತ, ಸಾಂಕೇತಿಕ ಮತ್ತು ಬಹುತಾರ್ಕಿಕ ಕಾವ್ಯಶೈಲಿ 1970-ರ ಮತ್ತು 80-ರ ದಶಕಗಳಲ್ಲಿ ಎಸ್ಟೋನಿಯಾದಲ್ಲಿ ಬರೆಯುತ್ತಿದ್ದ ಹೆಚ್ಚಿನ ಯುವ ಕವಿಗಳಿಗೆ ಸಾರ್ವತ್ರಿಕ ಉಲ್ಲೇಖಬಿಂದುಗಳಾಗಿದ್ದವು. ಬೇರೆ ಯಾವುದೇ ಎಸ್ಟೋನಿಯನ್ ಕವಿ ಈ ತರಹದ ಅನುಕರಣೆಗಳ, ಪ್ರಸ್ತಾಪಗಳ ಮತ್ತು ಮರುರೂಪಿಸುವಿಕೆಗಳ ಹರಿವನ್ನು ಸೃಷ್ಟಿಸಿಲ್ಲ: ಯುಹಾನ್ ವೀಡಿಂಗ್ ತಯಾರಿಸಿದ ಕಾವ್ಯದ ಅಚ್ಚಿನಲ್ಲಿ ಒಂದು ಇಡೀ ಪೀಳಿಗೆಯ ಕಾವ್ಯಭಾಷೆ ರೂಪುಗೊಂಡಿತು.
ಎಸ್.‌ ಜಯಶ್ರೀನಿವಾಸ ರಾವ್ ಬರೆಯುವ ಜಗತ್ತಿನ ಬೇರೆ ಬೇರೆ ಭಾಷೆಯ‌ ಕವಿಗಳ ಬದುಕು- ಅನುವಾದಿತ ಕವಿತೆಗಳ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ, ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಸ್. ಜಯಶ್ರೀನಿವಾಸ ರಾವ್‌ ಅನುವಾದಿಸಿದ ಬಲ್ಗೇರಿಯಾ ದೇಶದ ಕವಿ ಪೆಟರ್ ಚುಹೊಫ್-ರ ಆರು ಕವಿತೆಗಳು

“ಇಂದಲ್ಲ ನಾಳೆ
ಮೂಲ ಪದವು
ಒಡೆದು ಉಪಪದಗಳಾಗಿ ಚೂರುಚೂರಾಗುತ್ತೆ.
ಹಾಗೆಯೇ, ದೇವರು
ಒಡೆದು ಮನುಜರಾಗಿ ಚೂರುಚೂರಾಗುತ್ತಾನೆ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ