Advertisement
ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್‌ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.

ನೆದರ್‌ಲ್ಯಾಂಡ್ಸ್ ಸಂಕೀರ್ಣತೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಗ್ರಂಥಾಲಯಕ್ಕೆ ಇಡೀ ಕುಟುಂಬ ಭೇಟಿ ಕೊಡುತ್ತದೆ. ಸದಸ್ಯರು ತಮ್ಮ ತಮ್ಮ ಆಸಕ್ತಿಗನುಗುಣವಾಗಿ ಬೇರೆ ಬೇರೆ ಭಾಗಗಳಿಗೆ ಹೋಗಬಹುದು. ಗ್ರಂಥಾಲಯದೊಳಗೆ ಶಿಶುಪಾಲನಾ ಕೇಂದ್ರವೂ ಇದೆ. ಮಕ್ಕಳ ವಿಭಾಗದಲ್ಲಿ ಎಷ್ಟೊಂದು ಅನುಕೂಲಗಳು, ಆಟದ ಸಾಮಾನು, ಚಿತ್ರಕಲೆ ರಚಿಸುವ ವಿಭಾಗ, ಸ್ಟುಡಿಯೋ, ಮಕ್ಕಳ ಎತ್ತರಕ್ಕನುಗುಣವಾದ ಕುರ್ಚಿ, ಮೇಜು, ಬೇರೆ ಬೇರೆ ವಯಸ್ಸಿನ ಮಕ್ಕಳು ಓದಬಹುದಾದ ಪುಸ್ತಕಗಳು, ನಿಯತಕಾಲಿಕೆಗಳು, ನೆಲದ ಮೇಲೆ ಕುಳಿತುಕೊಂಡು, ಅಡ್ಡ ಮಲಗಿಕೊಂಡು ಕೂಡ ಓದುವ ಅನುಕೂಲ, ಬಣ್ಣ ಬಣ್ಣದ ಪೆನ್ಸಿಲ್‌ಗಳ ರಾಶಿ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹದಿಮೂರನೆಯ ಬರಹ

Read More

ಚರ್ಚ್, ಸಂಜೀವ, ಫ್ರೆಂಚ್ ಕನ್ನಡತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾವು ನಮ್ಮ ಬೆಂಗಳೂರಿನ ಮನೆಯ ಬಗ್ಗೆ ತಿಳಿಸಿದಾಗ, ನಾನು HSR ಬಡಾವಣೆಯಲ್ಲಿ ನಾಲ್ಕು ವರ್ಷ ಇದ್ದೆ. ಕನ್ನಡಿಗನನ್ನೇ ಮದುವೆ ಆಗಿದ್ದೇನೆ. ಆತ ಯೋಗ ಶಿಕ್ಷಕ ಎಂದು ತುಂಬಾ ಖುಷಿಯಿಂದ ಹೇಳಿದಳು. ಅವಳ ಮುಖದಲ್ಲಿ ಭಾರತೀಯ ಕಳೆ ಇದೆ ಎಂದು ನನಗೂ ಅನ್ನಿಸಿತು. ಹಾಗಾದರೆ, ನೀವು ಅರ್ಧ ಕನ್ನಡಿಗರಲ್ಲವೇ ಅಂದರೆ. ಬಾಯಿ ತುಂಬಾ ನಗುತ್ತಾ, ಇಲ್ಲ ನಾನು French, ನನ್ನ ಹೊಟ್ಟೆಯಲ್ಲಿರುವ ಮಗು ಅರ್ಧ ಕನ್ನಡಿಗ ಎಂದು ತನ್ನ ಉಬ್ಬಿದ ಹೊಟ್ಟೆಯ ಮೇಲೆ ಕೈ ಹೊಡೆದುಕೊಂಡು ನಕ್ಕಳು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು ಕೂಡ ಲ್ಯಾಂಡ್‌ ಬ್ಯಾಂಕ್‌ ಕೆಲಸದಲ್ಲಿ ಎಷ್ಟೇ ಹೊತ್ತು ತಡವಾದರೂ ಒಂದು ಸಲ ಸಂಜೆ ಅಂಗಡಿಗೆ ಹೋಗಿ, ಸಾಮಾನು, ಕ್ಯಾಶ್‌ ಎಲ್ಲ ಲೆಕ್ಕ ನೋಡಿ ತಮ್ಮನಿಗೆ ಸಹಾಯ ಮಾಡುತ್ತಿದ್ದ. ನೋಡಿ, ಈಗಿನ ಕಾಲದಲ್ಲೂ ಇಂತಹ ಗುಣವಂತ, ನೀತಿವಂತ ಹುಡುಗರು ಇರುತ್ತಾರಾ ಅಂತ ಕಿರಂಗೂರಿನ ಸಮಸ್ತ ಪ್ರಜೆಗಳಿಗೆ ಕೊನೇ ಪಕ್ಷ ಮೂರು ನಾಲ್ಕು ಸಲವಾದರೂ ಗೋದಾದೇವಿ ಹರಿಕತೆ ಮಾಡಿ ತಿಳಿಸಿದ್ದಳು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ಅಂಪೈರ್‌ ಮೇಡಂ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆತಂಕದಲ್ಲೋ, ಆಸೆಯಲ್ಲೋ ತಮ್ಮ ಹಾಗೆಯೇ ಕಾಣುವ ಭಾರತೀಯರನ್ನು ಸುರೀನಾಮಿಗಳು ಎಂದು ಭಾವಿಸುತ್ತಾರೆ. ಡಚ್ಚರು ಅವರು ಭಾರತೀಯರಲ್ಲ, ಕೇವಲ ಸುರೀನಾಮಿಗಳು ಎಂದು ಪ್ರವಾಸಿ ಭಾರತೀಯರನ್ನು ಎಚ್ಚರಿಸುತ್ತಾರೆ. ಕೆಲವರನ್ನು ಕಂಡಾಗ ಅವರು ಭಾರತೀಯರಾಗಿದ್ದರೆ ಎಂದು ನಮಗೂ ಆಸೆಯಾಗುತ್ತದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹನ್ನೆರಡನೆಯ ಬರಹ

Read More

ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ