Advertisement
ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್‌ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.

ಮೊಮ್ಮಕ್ಕಳಿಂದ ಕಲಿಯುವುದು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳನ್ನು ಪ್ರಬುದ್ಧರನ್ನಾಗಿ ಮಾಡುವ ನಮ್ಮ ಆತುರದಲ್ಲಿ ಅವರ ಬಾಲ್ಯದ ಸಂತೋಷಕ್ಕೆ ನಾವು ಅಡ್ಡ ಬರಬಾರದಷ್ಟೇ. ಈ ಎಚ್ಚರ ನನಗೆ ಯಾವಾಗಲೂ ಇತ್ತು. ನನಗೆ ಎಚ್ಚರವಿಲ್ಲದಿದ್ದರೂ ಏನೂ ತೊಂದರೆ ಆಗುತ್ತಿರಲಿಲ್ಲ. ಏಕೆಂದರೆ, ಅವನು ಪುಸ್ತಕಗಳಿಗಿಂತ ಹೆಚ್ಚಾಗಿ ತನ್ನ ವಯಸ್ಸಿನ ಮಕ್ಕಳ ಜೊತೆ ಬೆರೆಯುವುದನ್ನೇ, ಅವರೊಡನೆ ಆಟವಾಡುವುದನ್ನೇ ತುಂಬಾ ಇಷ್ಟಪಡುತ್ತಿದ್ದ. ದಣಿಯುವ ತನಕ ಅಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

Read More

ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್‌ನ ಮನೆಗಳಲ್ಲಿ ಇನ್ನೂ ಒಂದು ಸಂಗತಿಯನ್ನು ಗಮನಿಸಿದೆ. ಜೊತೆಯಲ್ಲಿ ಆಡಲು ಮಕ್ಕಳು ಸಿಗದೆ ಇರಬಹುದು. ಇದಕ್ಕೆ ಬದಲಾಗಿ, ಪ್ರತಿ ಮನೆಯಲ್ಲೂ ಒಂದೊಂದು ಶಿಶುವಿಹಾರಕ್ಕೆ ಆಗುವಷ್ಟು ಆಟದ ಸಾಮಾನುಗಳು, ಎಲೆಕ್ಟ್ರಾನಿಕ್ ಉಪಕರಣಗಳು ತುಂಬಿ ತುಳುಕುತ್ತಿರುತ್ತವೆ. ಮಕ್ಕಳು ಈ ಉಪಕರಣಗೊಳಡನೆಯೇ ಹೆಚ್ಚು ಸಮಯ ಕಳೆಯುತ್ತಾರೆ. ಆತ್ಮೀಯ ಸಂಬಂಧ ಸ್ಥಾಪಿಸಿಕೊಳ್ಳುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

Read More

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

Read More

ಕೋಟಿ ಸೈಕಲ್, ಎರಡು ರೈಲ್ವೆ ನಿಲ್ದಾಣ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇದೇ ರೀತಿ ಸೈಕಲ್ ಉಪಯೋಗಿಸಲು ಕೂಡ ಮಗುವಿಗೆ ಒಂದೂವರೆ ವರ್ಷವಾಗಿರುವಾಗಲೇ ತರಬೇತಿ ಪ್ರಾರಂಭವಾಗುತ್ತದೆ. ನೀವು ಒಂದು ಸೈಕಲನ್ನು ಮಗುವಿಗೆ ಒಂದೂವರೆ-ಎರಡು ವರ್ಷವಾಗಿದ್ದಾಗ ಖರೀದಿಸಿದರೆ, ಅದರಲ್ಲಿರುವ ಬೇರೆ ಬೇರೆ ಭಾಗಗಳನ್ನು ಕ್ರಮೇಣವಾಗಿ ಉಪಯೋಗಿಸುತ್ತಾ ತುಂಬಾ ವರ್ಷ ಬಳಸಬಹುದು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಎಂಟನೆಯ ಬರಹ

Read More

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ