Advertisement
ಮಾರುತಿ ಗೋಪಿಕುಂಟೆ

ಮಾರುತಿ ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೋಪಿಕುಂಟೆ ಗ್ರಾಮದವರು. ಶ್ರೀ ಅಮ್ಮಾಜಿ ಗ್ರಾಮಾಂತರ ಪ್ರೌಢಶಾಲೆ ಹಾರೋಗೆರೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಲವಾರು ಕತೆ-ಕವನಸಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. "ಎದೆಯ ನೆಲದ ಸಾಲು" ಎಂಬ ಕವನ ಸಂಕಲನ ಅಚ್ಚಿನಲ್ಲಿದೆ.

ಅವಮಾನ, ಕೀಳರಿಮೆ ಮತ್ತು ಸಂವೇದನೆ: ಮಾರುತಿ ಗೋಪಿಕುಂಟೆ ಸರಣಿ

ಬಹಳ ಪ್ರೀತಿಯಿಂದ ಸಾಕಿದ ಕುರಿಯೊಂದನ್ನು ನನಗೆ ಗೊತ್ತಿಲ್ಲದೆ ಹಬ್ಬಕ್ಕೆಂದು ಅಪ್ಪ ಮಾರಿಬಿಟ್ಟಿದ್ದ. ನನಗೆ ವಿಪರೀತ ದುಃಖವಾಗಿ ಒಂದು ದಿನ ಊಟವನ್ನೆ ಬಿಟ್ಟಿದ್ದೆ. ಬರುಬರುತ್ತಾ ಪ್ರಾಣಿಗಳನ್ನು ಸಾಕುವುದನ್ನೆ ಬಿಟ್ಟುಬಿಟ್ಟೆ. ಇವೆಲ್ಲವುಗಳ ನನ್ನೊಳಗೊಂದು ಸಂವೇದನೆಯನ್ನು ಹುಟ್ಟಿಹಾಕಿದವು. ಪ್ರಾಣಿಗಳು ಎಷ್ಟು ಅಲ್ಪಾಯುಗಳು ಅಲ್ಲವೆ? ಇನ್ನೊಬ್ಬರಿಗೆ ಆಹಾರವಾಗಲೊ, ಹರಕೆ ತೀರಿಸಲು ಬದುಕುವ ಈ ಪ್ರಾಣಿಗಳನ್ನು ಕುರಿತು ಬಸವಣ್ಣನವರ ವಚನ ನೆನಪಾಗುತ್ತದೆ; “ಹಬ್ಬಕ್ಕೆ ತಂದ ಹರಕೆಯ ಕುರಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಋಣಾನುಬಂಧದ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಆತ ಆಗಾಗ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದ. ಸುಮ್ಮನೆ ಊಟಮಾಡಬೇಕಲ್ಲ ಎಂಬ ಸ್ವಾಭಿಮಾನದ ಧೋರಣೆ ಆತನದ್ದಿರಬೇಕು. ಮನೆಯಲ್ಲಿ ಮಲಗು ಎಂದು ಎಷ್ಟು ಹೇಳಿದರೂ ಆತ ಕಿರಾಣಿ ಅಂಗಡಿಯ ಬಾಗಿಲ ಮುಂದೆಯೇ ಮಲಗುತ್ತಿದ್ದ. ಯಾಕೆಂದು ನಮಗೂ ತಿಳಿಯಲಿಲ್ಲ. ಅಡಿಗೆ ಆದಮೇಲೆ ನಾನೆ ತೆಗೆದುಕೊಂಡು ಹೋಗಿ ಕೊಡುತಿದ್ದೆ. ಊಟ ಮಾಡುತ್ತಿದ್ದ. ಮಾತಿಗಿಂತ ಮೌನವೆ ಹೆಚ್ಚು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಹಣಕ್ಕಾಗಿ ಕಡಿದುಹೋದ ಅನುಬಂಧ: ಮಾರುತಿ ಗೋಪಿಕುಂಟೆ ಸರಣಿ

ಮಾವನ ಎಲ್ಲಾ ಕೆಲಸಗಳಲ್ಲಿಯೂ ಅಪ್ಪ ಮುಂದಿರುತ್ತಿದ್ದ. ಕೊನೆಗೊಂದು ದಿನ ಮದುವೆಯ ಹೆಣ್ಣು ಗೊತ್ತಾಗಿ ಮದುವೆಯೂ ನಡೆದು ಹೋಯಿತು. ಮದುವೆಯಲ್ಲಿಯಂತೂ ಅಪ್ಪ ನಿರಂತರವಾಗಿ ಓಡಾಡಿದ್ದ. ತನ್ನ ಕೆಲಸಗಳನ್ನೆಲ್ಲ ಬದಿಗೊತ್ತಿ ಮುಂದೆ ನಿಂತು ಮದುವೆ ಮಾಡಿದ್ದ. ನಾವಿನ್ನೂ ಚಿಕ್ಕ ಹುಡುಗರಾದ್ದರಿಂದ ಮದುವೆಯಲ್ಲಿ ನಮ್ಮನ್ನು ಜೊತೆಗಿರಿಸಿಕೊಂಡೆ ಫೋಟೊ ತೆಗಿಸಿಕೊಂಡಿದ್ದ ನಮ್ಮಾವನಿಗೆ ನಮ್ಮ ಮೇಲೆ ಬಹಳ ಅಕ್ಕರೆ ಇದೆ ಎಂದುಕೊಂಡೆವು. ದೊಡ್ಡವರಾದ ಮೇಲೆಯೆ ನಮಗೂ ತಿಳಿದದ್ದು, ನಡತೆಗು ಮನಸ್ಸಿನ ಭಾವನೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆಯೆಂದು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ