Advertisement
ಪೂರ್ಣೇಶ್ ಮತ್ತಾವರ

ಪೂರ್ಣೇಶ್ ಮತ್ತಾವರ ಮೂಲತಃ ಚಿಕ್ಕಮಗಳೂರಿನವರು. ಮೂಡಿಗೆರೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿನ ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಸಂಘಟನೆಗಳಲ್ಲಿ ಸಕ್ರಿಯ. "ದೇವರಿದ್ದಾನೆ! ಎಚ್ಚರಿಕೆ!!" ಇವರ ಪ್ರಕಟಿತ ಕಥಾ ಸಂಕಲನ. ಕತೆಗಳು, ಲೇಖನಗಳು, ಮಕ್ಕಳ ಪದ್ಯಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪರಿಸರದ ಒಡನಾಟದಲ್ಲಿ ಒಲವಿದ್ದು, ಪಕ್ಷಿ ಛಾಯಾಗ್ರಹಣದಲ್ಲೂ ಆಸಕ್ತಿ ಹೊಂದಿದ್ದಾರೆ..

‘ಕಂಪ್ಯೂಟರ್’ಗೇ ಪಾಠ ಕಲಿಸಿದ ‘ಮೃತ್ಯು!’: ಪೂರ್ಣೇಶ್‌ ಮತ್ತಾವರ ಸರಣಿ

ಇನ್ನೂ ಕಂಪ್ಯೂಟರ್ ಸರ್‌ರ ವರ್ಣನೆಯನ್ನೆಲ್ಲಾ ಕೇಳಿ ಅವರೆಂದೂ ನಗು ಮೊಗದಿಂದ ಪಾಠ ಮಾಡಲೇ ಇಲ್ಲವೆಂದು ತಿಳಿಯಬೇಡಿ. ನಮ್ಮ ಕಂಪ್ಯೂಟರ್ ಸರ್‌ರಂತಹ ಕಂಪ್ಯೂಟರ್ ಸರ್ ಕೂಡ ನಗು ಮೊಗದೊಂದಿಗೆ ಪಾಠ ಹೇಳಿ ಕೊಡುವ ರಸ ಗಳಿಗೆಗಳಿಗೆ ನಾವು ಸಾಕ್ಷೀಭೂತರಾಗಿದ್ದೆವು. ಆದರೆ, ಆ ಅದೃಷ್ಟ ಇದ್ದದ್ದು ಮಾತ್ರ ನಮಗಲ್ಲ. ಬದಲಿಗೆ, ಕೆಲದಿನಗಳ ಮಟ್ಟಿಗೆ ಪಕ್ಕದ ಶೃಂಗೇರಿಯಿಂದ ಬರುತ್ತಿದ್ದ, ನೋಡಲು ಸುರಸುಂದರಿಯಂತಿದ್ದ ಅತಿಥಿ ಶಿಕ್ಷಕಿಯೊಬ್ಬರಿಗೆ ಮಾತ್ರ!
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎರಡನೆಯ ಬರಹ

Read More

ಪೂರ್ಣೇಶ್‌ ಮತ್ತಾವರ ಹೊಸ ಸರಣಿ “ನವೋದಯವೆಂಬ ನೌಕೆಯಲ್ಲಿ…” ಶುರು..

ಪಾಪ! ‘ಹನಿಮೂನ್’ ಪದವನ್ನು ತಾನು ನೋಡಿದ್ದ ರವಿಚಂದ್ರನ್ ಸಿನಿಮಾಗಳ “ಹನಿಮೂನ್ ಗೆ ಹೋಗಿ ಬರೋಣ…” ಎಂಬಂತಹ ಡೈಲಾಗ್‌ಗಳಲ್ಲಿ ಮಾತ್ರ ಕೇಳಿದ್ದ, ಅಮಾಯಕರಲ್ಲಿ ಅಮಾಯಕನಂತಿದ್ದ ರುದ್ರಸ್ವಾಮಿ, ‘ಹನಿಮೂನ್’ ಎಂದರೆ ಅಮೆರಿಕ, ಇಂಗ್ಲೆಂಡ್ ನಂತಹ ಯಾವುದೋ ಸುಂದರ ದೇಶವೋ ಇಲ್ಲ ಲಂಡನ್, ಪ್ಯಾರಿಸ್ ನಂತಹ ಸುಂದರ ನಗರವೋ ಇರಬೇಕೆಂದು ಆ ಕ್ಷಣದವರೆಗೂ ಪರಿಭಾವಿಸಿದ್ದ!
ನವೋದಯ ಶಾಲಾ ದಿನಗಳ ನೆನಪುಗಳ ಕುರಿತು ಪೂರ್ಣೇಶ್‌ ಮತ್ತಾವರ ಬರೆಯುವ ಹೊಸ ಸರಣಿ “ನವೋದಯವೆಂಬ ನೌಕೆಯಲ್ಲಿ…” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ದೇವರೇ ಬೆನ್ನಟ್ಟಿ ಬಂದಾಗ!

ಅದ್ಯಾವಾಗ ಹರ್ಷ ಬಾಗಿಲು ದಾಟಿದ ಸದ್ದಾಯಿತೋ ಕೋಮಲ ನಿಧಾನವಾಗಿ ಕಣ್ಣು ಬಿಟ್ಟಿದ್ದಾನೆ. ಬಿಟ್ಟವನು ತಾನು ಸಿನಿಮಾ ನೋಡಲು ಹೋಗುವುದೋ ಬೇಡವೋ ಎಂದು ಯೋಚಿಸುತ್ತಿರುವಾಗಲೇ ಫಕ್ಕನೆ ಕರೆಂಟ್ ಹೋಗಿದೆ! ಕೂಡಲೇ ಕೋಮಲ “ನಾನೂ ಜೊತೆಗೆ ಬರುತ್ತೇನೆ” ಎಂದು ಹರ್ಷನಿಗೆ ಹೇಳುವ ಸಲುವಾಗಿ “ಹರ್ಷ., ಹರ್ಷ.,” ಎಂದಿದ್ದಾನೆ. ನೋಡಿದರೆ ಅದಾಗಲೇ ಹರ್ಷ ಜಾಗ ಖಾಲಿ ಮಾಡಿ ಆಗಿದೆ. ಒಡನೆಯೇ ಕೋಮಲನಿಗೆ ಇಡೀ ಕಟ್ಟಡದಲ್ಲಿ ಇರುವುದು ತಾನೊಬ್ಬನೇ ಎಂಬ ಹೊಳವು ಬಂದು ದಿಗಿಲಾಗಿದೆ.
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ