Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಉಜ್ಬೆಕಿಸ್ತಾನದ ನೆನಪಿನಲ್ಲಿ ಇತಿಹಾಸದ ನೋಟಗಳು

ನಮ್ಮ ಗೈಡ್, ಇತಿಹಾಸ ತಜ್ಞೆ ಗುಲ್ಚೆಹರಾ ನಮ್ಮನ್ನು ಈ ಮದ್ರಸಾ ಮುಂದೆ ಇರುವ ಬೃಹತ್ತಾದ ಏಕಶಿಲಾ ಕುಂಡವನ್ನು ತೋರಿಸಿದಳು. ಅದು ಒಂದು ಟ್ಯಾಂಕರ್ ನೀರು ತುಂಬುವಷ್ಟು ಆಳ ಮತ್ತು ಅಗಲ ಹೊಂದಿದೆ. ೧೯೧೭ರಲ್ಲಿ ರಷ್ಯಾದಲ್ಲಿ ನಡೆದ ಅಕ್ಟೋಬರ್ ಮಹಾಕ್ರಾಂತಿ ನಡೆದ ಘಟನೆಯಲ್ಲಿ ಕಮ್ಯುನಿಸ್ಟ್ ಸರ್ಕಾರ ಬಂದದ್ದು ಗೊತ್ತಾದ ಕೂಡಲೆ ಸಮರಕಂದದ ಯುವತಿಯರು ತಮ್ಮ ಬುರ್ಖಾಗಳನ್ನು ತಂದು ಈ ಕುಂಡದಲ್ಲಿ ಹಾಕಿ ಸುಟ್ಟರು ಎಂದು ಗುಲ್ ಚೆಹರಾ ತಿಳಿಸಿದಳು. ಹಾಗೆ ಬುರ್ಖಾಗಳನ್ನು ಸುಟ್ಟವರಲ್ಲಿ ಆಗ ಯುವತಿಯಾಗಿದ್ದ ತನ್ನ ಅಜ್ಜಿಯೂ ಇದ್ದಳೆಂದು ಹೇಳಿದಳು. ನಮಗೆಲ್ಲ ಆಶ್ವರ್ಯವೆನಿಸಿತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗೆಲೆಲ್ಲʼ ಸರಣಿಯ ೪೬ನೇ ಕಂತು ಇಂದಿನ ಓದಿಗಾಗಿ

Read More

ಸಮರಕಂದ್‌ನ ಪಾರಂಪರಿಕ ಸ್ಥಳಗಳು ಮತ್ತು ಬಿಜಾಪುರದ ಗೋಲಗುಮ್ಮಟ

ಸಮರಕಂದ್ ನಗರದ ರೇಗಿಸ್ತಾನ್ ಚೌಕ್ ಅತ್ಯಂತ ಸುಂದರವಾದ ಇಸ್ಲಾಮೀ ಶೈಲಿಯ ವರ್ಣರಂಜಿತ ಇಮಾರತುಗಳಿಂದ ಕೂಡಿದ ಪ್ರದೇಶವಾಗಿದೆ. ತೈಮೂರ ಲಂಗನ ಗೋರಿ ಕೂಡ ಇಲ್ಲೇ ಇದೆ. ಅದು ಎತ್ತರದ ಪ್ರದೇಶದಲ್ಲಿರುವುದರಿಂದ ಬಹಳಷ್ಟು ಮೆಟ್ಟಿಲುಗಳನ್ನು ಹತ್ತಿ ಹೋಗಬೇಕು. ಸುದೈವದಿಂದ ನಮ್ಮ ಗೈಡ್ ಗುಲ್‌ಚೆಹರಾ ಎಂಬ ಯುವತಿ ಸಮರಕಂದ್ ಇತಿಹಾಸವನ್ನು ಬಹಳ ಚನ್ನಾಗಿ ಬಲ್ಲವಳಾಗಿದ್ದಳು. ಆಕೆ ಸಮರಕಂದ್ ಇತಿಹಾಸದ ಮೇಲೆ ಸಂಶೋಧನೆ ಮಾಡಿದವಳಾಗಿದ್ದಳೆಂಬ ನೆನಪು. ಪ್ರತಿಯೊಂದು ಸ್ಥಳದ ಬಗ್ಗೆ ಆಕೆ ವಿವರಿಸುವ ರೀತಿ ನನಗಂತೂ ಬಹಳ ಉಪಯುಕ್ತವಾಯಿತು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 45ನೇ ಕಂತು ಇಲ್ಲಿದೆ.

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ಸೋವಿಯತ್ ದೇಶದಲ್ಲಿ ಮಿಂಚಿದ ನಮ್ಮ ಧ್ವಜ

ತಾಷ್ಕೆಂಟ್ ವಿಮಾನ ನಿಲ್ದಾಣದಿಂದ ಹೊರಗೆ ಬಂದ ಕೂಡಲೇ ನನಗೆ ಆಶ್ಚರ್ಯ ಕಾದಿತ್ತು. ಎಲ್ಲೆಂದರಲ್ಲಿ ಭಾರತದ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬೀದಿಗಳು ನಮ್ಮ ಧ್ವಜದಿಂದ ಕೂಡಿದ ಪರಪರಿಗಳಿಂದ ಅಲಂಕೃತವಾಗಿದ್ದವು. ಎಲ್ಲೆಂದರಲ್ಲಿ ನಮ್ಮ ರವಿಶಂಕರ್ ಸಿತಾರ್ ಮತ್ತು ಬಿಸ್ಮಿಲ್ಲಾ ಖಾನ್ ಶಹನಾಯಿ ನಾದಮಾಧುರ್ಯಕ್ಕೆ ಕಿವಿಗಳು ತೆರೆದುಕೊಳ್ಳತೊಡಗಿದವು. ನಮ್ಮ ಗೈಡ್ ನಮ್ಮನ್ನು ಪಂಚತಾರಾ “ಹೋಟೆಲ್ ತಾಷ್ಕೆಂಟ್”ಗೆ ಒಯ್ದರು. ಅಲ್ಲಿಯೆ ರಿಷಪ್ಷನಿಸ್ಟ್ “ಇಂಜಿಷ್ಕಿ ದ್ರುಜಿಯೆ” (ಇಂಡಿಯನ್ ಫ್ರೆಂಡ್ಸ್) ಎಂದು ಖುಷಿಯಿಂದ ಬರಮಾಡಿಕೊಂಡರು. ಭಾರತದ ಬಗ್ಗೆ ಸೋವಿಯತ್ ದೇಶದವರಿಗೆ ಇದ್ದ ಅಭಿಮಾನ, ಪ್ರೀತಿ, ಗೌರವ ಕಂಡು ಆಶ್ಚರ್ಯಚಕಿತನಾದೆ.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 43ನೇ ಕಂತು ಇಲ್ಲಿದೆ.

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ