Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ದೌರ್ಬಲ್ಯಗಳಿಲ್ಲದ ಸ್ವಾಭಿಮಾನಿ ನನ್ನಪ್ಪನೇ ನನಗೆ ಮಾದರಿ

ಅಂದು ನನ್ನ ತಂದೆ ಸಂಭ್ರಮಿಸಿದ್ದು ಒಂದು ರೂಪಕವಾಗಿ ಮನದಲ್ಲಿ ಉಳಿದಿದೆ. ಅವರೆಲ್ಲ ಚೂಡಾ ತಿಂದ ಮೇಲೆ ಲಿಂಗಾಯತರಾದ ಶಿವಪ್ಪನವರಿಗೆ ಸಮೀಪದ ಲಿಂಗಾಯತರ ಮನೆಯಿಂದ ನೀರು ತಂದು ಕೊಟ್ಟ ನಂತರ ಅವರು ನೀರು ಕುಡಿದರು! ಆದರೆ ತಾಯಿ ಮಾಡಿಕೊಟ್ಟ ಚಹಾವನ್ನು ಎಲ್ಲರ ಜೊತೆ ಶಿವಪ್ಪ ಅವರೂ ಕುಡಿದರು. ಇದೆಲ್ಲ ನನಗೆ ವಿಚಿತ್ರ ಎನಿಸಿತು. ಅದೇ ನಳದ ನೀರು. ಲಿಂಗಾಯತರ ಮನೆಗೆ ಹೊಕ್ಕಾಗ ಅದು ಹೇಗೆ ಶುದ್ಧವಾಗುವುದು? ಆ ‘ಶುದ್ಧ’ ನೀರನ್ನು ನನ್ನ ತಂದೆ ತರುವಾಗ ಅಶುದ್ಧವಾಗುವುದಿಲ್ಲವೆ?

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಬೋರ್ಡಿಂಗ್ ನಲ್ಲಿ ಸರ್ವಧರ್ಮದ ಸೌಹಾರ್ದ ಗೀತ

ನನ್ನ ಬಾಲ್ಯಕಾಲದಲ್ಲಿ ಎಲ್ಲ ಸಮುದಾಯಗಳಲ್ಲಿ ಇಂಥ ಸಂವೇದನಾಶೀಲ ಮತ್ತು ನ್ಯಾಯನೀತಿಯ ಹಿರಿಯರು ಇದ್ದರು. ತಪ್ಪುಗಳು ಘಟಿಸಬಾರದು ಎಂಬುದಕ್ಕೆ ‘ನಾಲ್ಕು ಜನ ಏನಂದಾರು?’ ಎಂದು ತಪ್ಪು ದಾರಿ ಹಿಡಿಯುವ ಲಕ್ಷಣವುಳ್ಳವರಿಗೆ ಅವರು ಪ್ರಶ್ನಿಸುತ್ತಿದ್ದರು. ಅಂದಿನ ಕಾಲದಲ್ಲಿ ಸಮಾಜವೇ ದೈವವಾಗಿತ್ತು. ಹಿರಿಯರೇ ನ್ಯಾಯಾಧೀಶರಾಗಿದ್ದರು. ಇತರ ಅನುಭವಿಗಳೇ ವಕೀಲರಾಗಿದ್ದರು.

Read More

ಅಮ್ಮನ ನಂಬಿಕೆ, ಔಷಧಿಗಳ ಮಹಿಮೆಯಲ್ಲಿ ಕಳೆದ ಬಾಲ್ಯ

ಬಡ ಗಿರಾಕಿಗಳಿಂದ ಹಿಡಿದು ಶ್ರೀಮಂತ ಗಿರಾಕಿಗಳವರೆಗೆ ಅವರ ಶಕ್ತ್ಯನುಸಾರ ಹಣ್ಣುಗಳನ್ನು ಕೊಳ್ಳುತ್ತಿದ್ದರು. ಹಣ್ಣುಗಳನ್ನು ಕೊಳ್ಳುವಾಗ ರೇಟಿಗೆ ಸಂಬಂಧಿಸಿದ ಕೊಸರಾಟ ಮಜಾ ಅನಿಸುತ್ತಿತ್ತು. ಗಿರಾಕಿಗಳು ತಮ್ಮ ಎಲ್ಲ ತರ್ಕ ಉಪಯೋಗಿಸಿ ಕಡಿಮೆ ಬೆಲೆಗೆ ಕೇಳುತ್ತಿದ್ದರು. ಆ ಹಣ್ಣುಗಳನ್ನು ತರುವ ಕಷ್ಟ, ಅದಕ್ಕಾಗಿ ಮಾಡಿದ ಖರ್ಚು, ಗಿರಾಕಿಗಳು ಕೇಳುವ ಬೆಲೆಗಿಂತ ಹೆಚ್ಚಾಗಿದೆ ಎಂಬುದನ್ನು ಅಜ್ಜಿ ವಿವರಿಸುತ್ತಿದ್ದಳು. ಇಷ್ಟಕ್ಕಾದರೆ ಕೊಡು ಎಂದು ಹೇಳುತ್ತ ಗಿರಾಕಿಗಳು ಮುಂದೆ ಹೋದಂತೆ ಮಾಡುತ್ತಿದ್ದರು. ಅಜ್ಜಿ ಕರೆಯದೆ ಇದ್ದಾಗ ಮತ್ತೆ ವಾಪಸ್ ಬರುತ್ತಿದ್ದರು.

Read More

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ