ಶಾಲೆ ಕಳ್ಳ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಎಷ್ಟೋ ಸಲ ಗೇಟ್ ಹತ್ತಿರ ಹೋಗುವಾಗಲೇ ಶಾಲೆಯ ಪ್ರಾರ್ಥನೆ ಶುರುವಾಗುತ್ತಿತ್ತು. ಪ್ರಾರ್ಥನೆ ಹೇಳುವ ಮಕ್ಕಳ ಸಮೂಹ ಗಾಯನದಲ್ಲಿ, “ಮಂಗಳವನು ಕರೆಯುತಿರುವ ದೇವ ಶುಭವ ನೀಡಲಿ…” ಅಂತ ಕೇಳುವಾಗಲೇ ಅಳು ಉಕ್ಕಿ ಉಕ್ಕಿ ಬರುತ್ತಿತ್ತು. ತಡ ಆಯ್ತು, ಇನ್ನು ಟೀಚರ್ ಹೊಡಿತಾರೆ, ಅಮ್ಮ ಬಿಟ್ಟು ಹೋದ್ರು ಅನ್ನೋದು ಮಾತ್ರವಲ್ಲದೇ ಎದೆಯಲ್ಲಿ ಯಾವುದೋ ಏಕಾಂಗಿ ಭಾವ ಉಕ್ಕಿ ದುಃಖ ಉಮ್ಮಳಿಸಿ ಬರುತ್ತಿತ್ತು. ಅದು ಆ ಪ್ರಾರ್ಥನೆಯ ರಾಗದಿಂದ ಹಾಗಾಗುತ್ತಿತ್ತೋ ಅಥವಾ ಬೇರಾವುದರಿಂದಲೋ ಗೊತ್ತಾಗುತ್ತಿರಲಿಲ್ಲ. ನಿಂತಲ್ಲಿಯೇ ಜೋರಾಗಿ ಅತ್ತು ಬಿಡುತ್ತಿದ್ದೆ.
ಶಾಲೆಗೆ ಹೋಗುವುದನ್ನು ತಪ್ಪಿಸಲು ನೋಡುವ ಶಾಲೆ ಕಳ್ಳರ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
