Advertisement
ರೂಪಾ ರವೀಂದ್ರ ಜೋಶಿ

ರೂಪಾ ರವೀಂದ್ರ ಜೋಶಿ ಮೂಲತಃ ಶಿರಸಿ ತಾಲ್ಲೂಕಿನ ದಾನಂದಿ ಗ್ರಾಮದವರು. ಸಧ್ಯ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ವೃತ್ತಿಪರ ಲೆಕ್ಕಪತ್ರ ಬರಹಗಾರರಾಗಿ ಕೆಲಸ ಮಾಡುತ್ತಿರುವ ಇವರಿಗೆ ವಿವಿಧ ಪ್ರಕಾರದ ಸಾಹಿತ್ಯ ಬರವಣಿಗೆ ಹಾಗೂ ಅಧ್ಯಯನದಲ್ಲಿ ಮತ್ತೂ ರಂಗಭೂಮಿಯಲ್ಲೂ ಆಸಕ್ತಿ. ಸಾಗುತ ದೂರಾ ದೂರಾ (ಕಥಾ ಸಂಕಲನ), ಅಜ್ಞಾತೆ (ಸಾಮಾಜಿಕ ಕಾದಂಬರಿ) ೨೦೧೭ (ಲೇಖಿಕಾ ಪ್ರಶಸ್ತಿ ದೊರೆತಿದೆ), ಕಾನುಮನೆ (ಪತ್ತೆದಾರಿ ಕಾದಂಬರಿ) ೨೦೧೯ (ಕ ಸಾ ಪ ದತ್ತಿ ಪ್ರಶಸ್ತಿ ದೊರೆತಿದೆ, ಶೃಂಖಲಾ (ಸಾಮಾಜಿಕ ಕಾದಂಬರಿ) ೨೦೨೦ ( ರತ್ನಮ್ಮ ಹೆಗ್ಗಡೆ ಪ್ರಶಸ್ತಿ ದೊರೆತಿದೆ), ವಾಟ್ಸಪ್ ಕಥೆಗಳು (ಕಿರುಕಥಾ ಸಂಕಲನ), ಹತ್ತರ ಕೂಡ ಹನ್ನೊಂದು  (ಪ್ರಬಂಧಗಳ ಸಂಕಲನ), ಚಿಗುರು ಬುತ್ತಿ (ಮಕ್ಕಳ ಕಾದಂಬರಿ) ಇವರ ಪ್ರಕಟಿತ ಕೃತಿಗಳು.

ಸುಂದರ ಕಾಡಿನ ರೋಚಕ ಕಥೆಗಳು ಭಾಗ -೩: ರೂಪಾ ರವೀಂದ್ರ ಜೋಷಿ ಸರಣಿ

ಈ ಹೂವು ಪಾರಿಜಾತದಂತೇ ತಾನೇ ತಾನಾಗಿ ಮರದಿಂದ ಉದುರುವಂಥದ್ದು. ಅದಕ್ಕೇ ನಾವೆಲ್ಲಾ ಬೆಳಗ್ಗೆ ಬೇಗನೆ ಎದ್ದು, ಮುಖ ತೊಳೆದವರೇ, ಆ ಮರದತ್ತ ಓಡುತ್ತಿದ್ದೆವು. ಕಾರಣ, ಬೇರೆಯವರು ಬಂದು ಆರಿಸಿಕೊಂಡರೆ? ಎಂಬ ಆತಂಕ ಒಂದು ಇರುತ್ತಿತ್ತಲ್ಲಾ… ಓಡುತ್ತ ಹೋದವರೇ, ಮರದ ಬುಡಕ್ಕೆ ಬಿದ್ದ ಹೂವನ್ನು ಆರಿಸಿ, ಕಾಡು ಎಲೆಗಳ ಕೊಟ್ಟೆ ಮಾಡಿ ಅದರಲ್ಲಿ ತುಂಬಿಕೊಳ್ಳುತ್ತಿದ್ದೆವು. ಪುಟ್ಟ ವೃತ್ತಕಾರದ ಈ ಹೂವಿಗೆ ಸುತ್ತಲೂ ಕಣ್ಣು ರೆಪ್ಪೆಯಂಥ ಸೂಕ್ಷ್ಮವಾದ ಬೆಳ್ಳನೆಯ ಚೂಪನೆಯ ಎಸಳುಗಳು. ಮಧ್ಯದಲ್ಲಿ ಒಂದು ರಂದ್ರ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೆರಡನೆಯ ಕಂತು

Read More

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ