Advertisement
ರೂಪಾ ರವೀಂದ್ರ ಜೋಶಿ

ರೂಪಾ ರವೀಂದ್ರ ಜೋಶಿ ಮೂಲತಃ ಶಿರಸಿ ತಾಲ್ಲೂಕಿನ ದಾನಂದಿ ಗ್ರಾಮದವರು. ಸಧ್ಯ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ವೃತ್ತಿಪರ ಲೆಕ್ಕಪತ್ರ ಬರಹಗಾರರಾಗಿ ಕೆಲಸ ಮಾಡುತ್ತಿರುವ ಇವರಿಗೆ ವಿವಿಧ ಪ್ರಕಾರದ ಸಾಹಿತ್ಯ ಬರವಣಿಗೆ ಹಾಗೂ ಅಧ್ಯಯನದಲ್ಲಿ ಮತ್ತೂ ರಂಗಭೂಮಿಯಲ್ಲೂ ಆಸಕ್ತಿ. ಸಾಗುತ ದೂರಾ ದೂರಾ (ಕಥಾ ಸಂಕಲನ), ಅಜ್ಞಾತೆ (ಸಾಮಾಜಿಕ ಕಾದಂಬರಿ) ೨೦೧೭ (ಲೇಖಿಕಾ ಪ್ರಶಸ್ತಿ ದೊರೆತಿದೆ), ಕಾನುಮನೆ (ಪತ್ತೆದಾರಿ ಕಾದಂಬರಿ) ೨೦೧೯ (ಕ ಸಾ ಪ ದತ್ತಿ ಪ್ರಶಸ್ತಿ ದೊರೆತಿದೆ, ಶೃಂಖಲಾ (ಸಾಮಾಜಿಕ ಕಾದಂಬರಿ) ೨೦೨೦ ( ರತ್ನಮ್ಮ ಹೆಗ್ಗಡೆ ಪ್ರಶಸ್ತಿ ದೊರೆತಿದೆ), ವಾಟ್ಸಪ್ ಕಥೆಗಳು (ಕಿರುಕಥಾ ಸಂಕಲನ), ಹತ್ತರ ಕೂಡ ಹನ್ನೊಂದು  (ಪ್ರಬಂಧಗಳ ಸಂಕಲನ), ಚಿಗುರು ಬುತ್ತಿ (ಮಕ್ಕಳ ಕಾದಂಬರಿ) ಇವರ ಪ್ರಕಟಿತ ಕೃತಿಗಳು.

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ನನ್ನ ಪುಟ್ಟ ಶಾಲೆ: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮ ಗುರ್ಜಿ ಎಲ್ಲರ ಕೈ ಮೇಲೆ ಕಿತ್ತಳೆ ತೊಳೆ ಆಕಾರದ ಪೆಪ್ಪರಮಿಠಾಯಿ ಇಡುತ್ತಿದ್ದಂತೇ, ಅದು ಬುಳಕ್ಕನೆ ಬಾಯಿಗಿಳಿದು ಬಿಡುತ್ತಿತ್ತು. ನಾವೆಲ್ಲ ಅದನ್ನು ಕಡಿಯದೇ ದವಡೆಯಲ್ಲಿ ಅದುಮಿಟ್ಟುಕೊಂಡು ಮೆಲ್ಲಗೆ ರಸ ಹೀರಿ, ಹೀರಿ ಚಪ್ಪರಿಸುತ್ತಿದ್ದೆವು. ಅದು ಖಾಲಿಯಾಗುವ ತನಕ ಮಾತು ಕತೆ ಎಲ್ಲ ಬಂದ್… ನಮ್ಮಿಡೀ ದಿನದ ಸಂಭ್ರಮ, ಸಂತೋಷ ಆ ಪುಟ್ಟ ಮಿಠಾಯಿಗೋಸ್ಕರವೇ ಇರುತ್ತಿತ್ತೊ ಗೊತ್ತಿಲ್ಲ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ