Advertisement
ಎಸ್. ನಾಗಶ್ರೀ ಅಜಯ್

ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಪ್ರಪಂಚದ ಕಣ್ಣಿಗೆ ಬೀಳುವಾಗಿನ ನಾಟಕವನ್ನಾದರೂ ಸಹಿಸಬಹುದು. ಕುಟುಂಬದೊಳಗೂ ಸಹಜವಾಗಿ ಬೆರೆಯಲಾಗದ ಸ್ಥಿತಿಯೀಗ ಪ್ರತಿ ಮನೆಯ ದುರಂತ. ತೊಟ್ಟಿಲ ಕೂಸು ಕಿಟಾರೆಂದರೆ ಗೂಗಲ್ ರಿಸರ್ಚ್ ಮಾಡುವ, ನಿಂಗೇನ್ಗೊತ್ತು ಈ ಕಾಲದ ಕಷ್ಟಸುಖ ಸುಮ್ಮನಿರಮ್ಮ ಎಂದು ಮೂರು ಮಕ್ಕಳು ಹೆತ್ತಾಕೆಯನ್ನೇ ಮೂಲೆಗೆ ಕೂರಿಸುವ ದಿನ. ಮೊಮ್ಮಕ್ಕಳಿಗೆ ಬಾಯಿಪಾಠ ಹೇಳಿಕೊಡಲು, ಚದುರಂಗ, ಚೌಕಾಬಾರ, ಹುಲಿ ಕರಡಿ ಆಡಿಸಲು, ಅಡುಗೆಯ ಪ್ರಾಥಮಿಕ ತರಬೇತಿ ನೀಡಲು, ರಂಗೋಲಿ, ಕಸೂತಿ, ಹಾಡುಹಸೆ ಕಲಿಸಲು ಹಾತೊರೆಯುವ ಅಜ್ಜ ಅಜ್ಜಿಯರು ಇನ್ನೂ ಇದ್ದಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ

Read More

ಬದುಕಿನ ಪಯಣದಲ್ಲಿ ತಂಗುದಾಣಗಳೂ ಇರಲಿ: ಎಸ್. ನಾಗಶ್ರೀ ಅಜಯ್ ಅಂಕಣ

ನಮಗೇನು ಬೇಕು? ಒಂದು ಒಳ್ಳೆಯ ಬಿಡುವು, ನಮ್ಮದೆನ್ನುವ ಸ್ವಲ್ಪ ಸಮಯ, ಜೀವನಕ್ಕೊಂದು ಗುರಿ, ಹತ್ತಿರದವರ ಮೆಚ್ಚುಗೆ ಮತ್ತು ಅಹಂಕಾರಕ್ಕಿಂತ ವಿನಮ್ರತೆಯಲ್ಲಿ ಸುಖ ಕಾಣುವ ಮನಃಸ್ಥಿತಿ. ಪ್ರತಿದಿನವೂ ಅರ್ಧಗಂಟೆಯಾದರೂ ವ್ಯಾಯಾಮ, ನಡಿಗೆ, ಯೋಗ ಇತ್ಯಾದಿಗೆ ಸಮಯ ಮೀಸಲಿಡುವುದು, ಮರೆತುಹೋದ ಹವ್ಯಾಸಗಳೊಂದಿಗೆ ಮತ್ತೆ ಸಖ್ಯ ಬೆಳೆಸುವುದು, ಹೊಸತನ್ನು ಕಲಿಯುವುದು, ಉದ್ಯೋಗ ಮತ್ತು ವೈಯಕ್ತಿಕ ಬದುಕಿನ ನಡುವೆ ಅಂತರ ಕಾಯ್ದುಕೊಳ್ಳುವುದು ಹಾಗೂ ನಮ್ಮ ಇಂದಿನ ಬದುಕು ಹಲವರ ಕನಸೆಂಬುದನ್ನು ಮನಗಾಣುವುದು ಸಹಾಯ ಮಾಡಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಇದ್ದಷ್ಟು ಇರಲಿ…: ಎಸ್ ನಾಗಶ್ರೀ ಅಜಯ್ ಅಂಕಣ

ತೀರ ಅತಿಯೆನಿಸುವಷ್ಟು ಅಲ್ಲದಿದ್ದರೂ ನಾವೆಲ್ಲರೂ ಒಂದಿಲ್ಲೊಮ್ಮೆ ಈಗಿರುವುದೇ ಚೆಂದ ಎಂದುಕೊಳ್ಳಲು ಆಸೆಪಟ್ಟವರೇ. ಬಡತನ, ಅನಾರೋಗ್ಯ, ಅಜ್ಞಾನಗಳನ್ನು ರಮ್ಯವಾಗಿ ಚಿತ್ರಿಸುತ್ತಾ ಪರಿಶ್ರಮದಿಂದ ಮೇಲೇರಿದವರ ಸಾಧನೆಯನ್ನು ಕಡೆಗಣಿಸಿ ಮಾತನಾಡುತ್ತಾ ಹುಸಿ ಆನಂದ ಹೊಂದಿದವರೇ. ಬಹಳಷ್ಟು ಸಲ ಎದುರಿನವರ ಮೂಗಿನ ನೇರಕ್ಕೆ ಮಾತನಾಡಿ ‘ಒಳ್ಳೆಯವರಾಗಿ’ ಕಾಣುವ ಆಸೆಯೇ ಡೋಂಗಿಗಳ ಬಡಾಯಿಗೆ ಜೈಹೋ ಎನ್ನುವಂತೆ ಮಾಡಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಆತಿಥ್ಯದ ಮುಖಗಳು: ಎಸ್. ನಾಗಶ್ರೀ ಅಜಯ್ ಅಂಕಣ

ಮಾತಾಡಿದರೂ ಅಂತಸ್ತು ಪ್ರದರ್ಶಿಸುವ, ತಾವೆಷ್ಟು ಅನುಕೂಲಸ್ಥರು, ಬುದ್ಧಿವಂತರು, ಜಗದ ಎಲ್ಲ ಸಮಾಚಾರ ಬಲ್ಲವರು ಎಂಬ ಒಣಪ್ರತಿಷ್ಠೆ ತೋರ್ಪಡಿಸುವ ಪ್ರಚಾರತಂತ್ರದ ಗಿಮಿಕ್ಕು ಮಾತ್ರವೇ. ಗಂಡ-ಹೆಂಡತಿ ಮನೆಯಲ್ಲಿ ಕಾದಾಡುವ ಬದಲು ಅಲ್ಲಿ ಕಣ್ಣಲ್ಲೇ ಗುರಾಯಿಸ್ತಾ, ‘ನಿಂಗಿದು ಬೇಕಿತ್ತಾ ಮಗನೆ?’ ಎಂಬ ಸಂದೇಶ ರವಾನಿಸುತ್ತಾ ಕಾಲ ತಳ್ಳಬೇಕು. ಸದ್ಯ ಗಂಟೆಗೆ ಅರವತ್ತೇ ನಿಮಿಷ ಅನ್ನಿಸುವಾಗಲೇ ತರಬೇತುಗೊಂಡ ನಾಯಿಯಂತೆ ಊಟ, ತಿಂಡಿ, ಕಾಫಿ ವಾಸನೆ ಹಿಡಿದು ಊಟದ ಆಟ ಮುಗಿಸಿ, ತಾಂಬೂಲ ಪಡೆದು ‘ಬರ್ತೀವಿ’ ಎನ್ನಬೇಕು. ‌’ಸಂತೋಷ’ ಎನ್ನುವರು. ಅದು ಬಂದಿದ್ದಕ್ಕೋ ಹೊರಟಿದ್ದಕ್ಕೋ ಯೋಚಿಸದೆ ಮನೆಯ ದಾರಿ ಹಿಡಿಯಬೇಕು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ