Advertisement
ಎಸ್. ನಾಗಶ್ರೀ ಅಜಯ್

ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಹಂಚಿ ಹಗೂರಾಗಿ, ಬೇಗುದಿಗಳನೆಲ್ಲ…

ಎಲ್ಲದರಲ್ಲೂ ಹುಳುಕು ಹುಡುಕುತ್ತಾ, ಗೋಳುಗುಟ್ಟುತ್ತಾ, ಆಪಾದಿಸುತ್ತಾ, ಕೊಂಕು ತೆಗೆಯುತ್ತಾ ಕೂರುವುದು ಸರಿಯಲ್ಲ. ಆದರೆ ಬದುಕೆಂದರೆ ಸಿಹಿ-ಕಹಿಗಳೆರಡೂ ಇರುವಾಗ, ಸಿಹಿಯ ಮಾತನ್ನೇ ಹಂಚುತ್ತಾ, ಕಹಿಯನ್ನೆಲ್ಲಾ ಒಳಗೇ ನುಂಗಿ ನುಂಗಿ ನಂಜುಂಡರಾಗುವುದು ನಮ್ಮ ಮೇಲೆ ನಾವೇ ಹೊರೆಸಿಕೊಳ್ಳುವ ಭಾರ. ಹತ್ತರಲ್ಲಿ ಒಂದು ಸಲವಾದರೂ ನೋವನ್ನು ನೋವಾಗಿ, ಅಳುವನ್ನು ಅಳುವಾಗಿ, ಸೋಲನ್ನು ಸೋಲಾಗಿ ತೋರಿಸಿಕೊಳ್ಳುವ ಸ್ವಾತಂತ್ರ್ಯ ನಾವು ರೂಢಿಸಿಕೊಳ್ಳಬೇಕಿದೆ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ