Advertisement
ಸದಾಶಿವ ಸೊರಟೂರು

ಸದಾಶಿವ ಸೊರಟೂರು ಅವರು ಹುಟ್ಟಿದ್ದು ಬೆಳೆದಿದ್ದು ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಮಲೇಬೆನ್ನೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕನ್ನಡ ಪಾಠ ಹೇಳುವ ಮೇಷ್ಟ್ರು. ಇವರ ಹಲವಾರು ಲೇಖನಗಳು, ಕತೆ, ಕವನ, ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 'ಹೆಸರಿಲ್ಲದ ಬಯಲು' ಮತ್ತು ' ತೂತು ಬಿದ್ದ ಚಂದಿರ' (ಕವನ ಸಂಕಲನ)  ಹಾಗೂ  ಕನಸುಗಳಿವೆ ಕೊಳ್ಳುವವರಿಲ್ಲ ಭಾಗ ೧ ಮತ್ತು ಭಾಗ ೨. ಹೊಸ್ತಿಲಾಚೆ ಬೆತ್ತಲೆ (ಪ್ರಕಟಿತ ಲೇಖನಗಳ ಕೃತಿಗಳು) ಇವರ ಪ್ರಕಟಿತ ಕೃತಿಗಳು.

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ದಯವಿಟ್ಟು ಈ ಮುಟ್ಟಿಗೊಂದು
ಅವಮಾನವಾದರೂ
ಆಗಲಿ
ಮುಖ ಬಾಡಿಸಿಕೊಂಡು ಹೋದ
ಮುಟ್ಟು
ಮುಂದಿನ ಬಾರಿ ಬರದೆ ನಿಲ್ಲಲಿ
ಗರ್ಭದೊಳಗೊಂದು ಚಿಗುರು ಮೂಡಲಿ” -ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಹಬ್ಬದ ಮುಖ ತೊಳೆದು ಬಿಂದಿ ಇಡುವ ‘ಅವಳು’: ಸದಾಶಿವ ಸೊರಟೂರು ಬರಹ

ನಾನಿನ್ನು ಎದ್ದು ಆಕಳಿಸುತ್ತಾ ಕೂತಿರುವಾಗ ಈ ಹೆಣ್ಣು ಮಕ್ಕಳಿಗೆ ಏನಾಗಿದೆ? ಈ ಬದುಕು ಎಂದೂ ಕೂಡ ನಮಗೆ ಸುಸ್ತನ್ನೇ ದಯಪಾಲಿಸಿಯೇ ಇಲ್ಲವೇನೊ ಎನ್ನುವಂತೆ ಯಾಕಿಷ್ಟು ಕಳೆಕಳೆಯಾಗಿದ್ದಾರೆ. ಒಬ್ಬೊಬ್ಬರು ಒಂದೊಂದು ಹಬ್ಬದಂತೆ ಓಡಾಡುತ್ತಿದ್ದಾರೆ. ಈ ಹಬ್ಬದ ದಿನ ಒಬ್ಬೊಬ್ಬ ಹೆಣ್ಣು ಮಗಳು ನಡೆದಾಡುವ ಒಂದೊಂದು ತೇರೇನೊ ಅನಿಸುತ್ತದೆ. ಈ ಹಬ್ಬವನ್ನು, ಹಬ್ಬದ ಸಂಭ್ರಮವನ್ನು ಹೆಣ್ಣು ಮಕ್ಕಳು ವಶಪಡಿಸಿಕೊಂಡರಾ?
ಏನೆಲ್ಲದರ ನಡುವೆ ಬದುಕನ್ನೂ, ಆಗಾಗ ಬರುವ ಹಬ್ಬಗಳನ್ನೂ ಸಮನಾಗಿ ತೂಗಿಸಿಕೊಂಡು ಹೋಗುವ ಹೆಣ್ಣುಮಕ್ಕಳ ಕುರಿತು ಸದಾಶಿವ ಸೊರಟೂರು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ

ರಾತ್ರಿಯಾದರೂ ದೊಡ್ಡಪ್ಪ ಊರು ಮುಟ್ಟಿದ ಬಗ್ಗೆ ಫೋನ್ ಬರಲಿಲ್ಲ. ಆಯಾಸದಲ್ಲಿ ಮರೆತು ಹೋಗಿರಬೇಕೆಂದು ಸಮಾಧಾನಿಸಿಕೊಂಡೆ. ರಾತ್ರಿ ಎಷ್ಟೊ ಹೊತ್ತಿನವರೆಗೂ ನಿದ್ದೆ ನನ್ನ ಬಳಿ ಸುಳಿಯಲಿಲ್ಲ. ಇಂಥ ವಿಷಯಗಳಲ್ಲಿ ನಿದ್ದೆಯೆಂದೂ ಕೂಡ ಜೊತೆಗಾರನಾಗಿರುವುದಿಲ್ಲ. ಕಣ್ಣಿಗೆ ನಿದ್ದೆ ಹತ್ತಿಕೊಳ್ಳುವ ಹೊತ್ತಿಗೆ ಮುಂಜಾವು ಬಂದಿತ್ತು. ಇನ್ನೂ ಅರೆ ಮಂಪರು. ಗಾಢ ನಿದ್ದೆಯೇನ್ನಲ್ಲ. ಮೊಬೈಲ್ ರಿಂಗಣಸಿತು. ಹರೀಶ ಕಾಲ್ ಮಾಡ್ತಿದ್ದಾನೆ. ಏನು ಇಷ್ಟೊತ್ತಲ್ಲಿ ಫೋನ್? ಯಾಕೊ ಸಣ್ಣಗೆ ಭಯವಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ “ಮುಗಿಲ ದುಃಖ”

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಂಡೆಯೊಳಗೆ ಕುದಿಸಿಟ್ಟುಹೋದ
ನೀರು ಆರಿಲ್ಲ
ಸೀಗೆ ಸಾಬೂನು ಟವಲು ಅವನ
ಮಾತು ಮೀರಿ ಕದಲಿಲ್ಲ
ಅಂವ ದೇವರ ಮುಂದೆ ಹಚ್ಚಿಟ್ಟು
ಹೋದ ಹಣತೆ ಇನ್ನೂ ಆರಿಲ್ಲ..
ಬಿಡಿಸಿ ದೇವರಿಗೆ ಮುಡಿಸಿ ಹೋದ
ಹೂವೂ ಬಾಡಿಲ್ಲ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ನಾನು ಅಂಗಳಕ್ಕೆ ನೀರು ಚೆಲ್ಲುತ್ತಿದ್ದೆ
ಅವಳು ರಂಗೋಲಿ
ಬರೆಯುತ್ತಿದ್ದಳು
ನಾನು ಹೂವು ಕೊಯ್ಯುತ್ತಿದ್ದೆ
ಅವಳು ದಾರ ಹಿಡಿದು ನಿಲ್ಲುತ್ತಿದ್ದಳು
ಅವಳು ಉಸಿರು ಬಿಡುತ್ತಿದ್ದಳು
ನಾನು ಆ ಉಸಿರು ಕುಡಿದು ಬದುಕುತ್ತಿದ್ದೆ
ಅವಳು ಸವಿನಿದ್ದೆ ಉಣ್ಣುತ್ತಿದ್ದಳು”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ