Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಆಸ್ಟ್ರೇಲಿಯಾದಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ 2023: ವಿನತೆ ಶರ್ಮ ಅಂಕಣ

ಪ್ರಾಪಂಚಿಕ ಮಟ್ಟದಲ್ಲಿ ನಡೆಯುವ ಮಹಿಳಾ ಫುಟ್ಬಾಲ್ ಈ ಬಾರಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲ್ಯಾಂಡ್ ದೇಶಗಳ ಮಡಿಲು ಸೇರಿದೆ. ವಿಶ್ವ ಕಪ್ ಗೆಲ್ಲಲು ಬರೋಬ್ಬರಿ ೩೨ ತಂಡಗಳು ಸೆಣಸಾಡುತ್ತಿವೆ. ದೇಶದ ಮುಖ್ಯ ರಾಜಧಾನಿ ನಗರಗಳಾದ ಅಡಿಲೈಡ್, ಮೆಲ್ಬೋರ್ನ್, ಸಿಡ್ನಿ, ಬ್ರಿಸ್ಬೇನ್, ಪರ್ತ್ ಗಳಲ್ಲಿ ವಿವಿಧ ಗುಂಪುಗಳು ತಮ್ಮ ಕಾಲ್-ಚಳಕ ತೋರಲಿವೆ. ಇದಲ್ಲದೆ ನ್ಯೂಝಿಲ್ಯಾಂಡ್ ದೇಶದ ನಾಲ್ಕು ಕಡೆ ಪಂದ್ಯಗಳು ನಡೆಯಲಿವೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ

ಚಕ್ರಮುನಿ ಸೊಪ್ಪಿನ ಗಿಡ ಖರೀದಿಗಿದ್ದದ್ದು ನೋಡಿ ನನ್ನ ಕಣ್ಣರಳಿತು! ಬೆಂಗಳೂರು, ಮೈಸೂರಿನಲ್ಲಿ ಈ ಚಕ್ರಮುನಿ ಎಲೆಗಳನ್ನು ತಿನ್ನುವ ಅಭ್ಯಾಸವಿತ್ತು. ಬ್ರಿಸ್ಬೇನ್ನಿನಲ್ಲಿ ಅಪರೂಪಕ್ಕೆ ವಾರಾಂತ್ಯ ತರಕಾರಿ-ಹಣ್ಣು ಮಾರ್ಕೆಟ್ಟಿನಲ್ಲಿ ವಿಯೆಟ್ನಮೀಸ್ ಮಾರಾಟಗಾರರು ತರುತ್ತಿದ್ದ ಚಕ್ರಮುನಿ ಸೊಪ್ಪನ್ನು ಕಂಡು ಸಂಭ್ರಮಿಸಿದ್ದೆ. ಅದನ್ನು ಕೊಂಡು ಅದರ ಕೊಂಬೆಗಳನ್ನು ನೆಟ್ಟು ಎರಡು ಬಾರಿ ಇದನ್ನು ಬೆಳೆಯಲು ಪ್ರಯತ್ನಿಸಿ ಸೋತಿದ್ದೆ. ಜೆರ್ರಿ ಅವರ ಸ್ವಾವಲಂಬಿ ಕೈತೋಟದಲ್ಲಿ ಚೆನ್ನಾಗಿ ಬೆಳೆದಿದ್ದ ಗಿಡವನ್ನು ನೋಡಿ ಸಂತೋಷವಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ