Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

‘ಊಲುರು ಮಾತು’ ಎಂಬ ಹೊಸ ಭಾಷ್ಯ

ದೇಶೀಯ ಮಟ್ಟದಲ್ಲಿ ಆಡಳಿತ ನಡೆಸುವ ಪಾರ್ಲಿಮೆಂಟಿಗೆ ಅಬೊರಿಜಿನಲ್ ಜನರ ಸಮಿತಿಯನ್ನು ನೇಮಿಸಿ ಅವರ ದನಿಗೆ ಪುನಃಶ್ಚೇತನ ಕೊಡುವ ಭರವಸೆಯನ್ನು ಆಸ್ಟ್ರೇಲಿಯಾದ ಹೊಸ ಸರ್ಕಾರ ನೀಡಿದೆ.  ಅಷ್ಟೇ ಅಲ್ಲ, ದೇಶದ ಸಂವಿಧಾನದಲ್ಲಿ ಅವರ ದನಿಯನ್ನು ಸೇರ್ಪಡಿಸುವ ಮಾತನ್ನು ಕೊಟ್ಟಾಗಿದೆ. ಹೊಸ ಪ್ರಧಾನಮಂತ್ರಿಗಳ ಮಾತಿನಿಂದ ಅಬೊರಿಜಿನಲ್ ಜನಸಮುದಾಯಗಳ ನಾಯಕರಲ್ಲಿ, ಹಿರಿಯರಲ್ಲಿ ಸಂಚಲನೆ ಮೂಡಿದೆ. ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮಾ ಅವರು ಆಸ್ಟ್ರೇಲಿಯಾದ ವರ್ತಮಾನಗಳನ್ನು ಬರೆದಿದ್ದಾರೆ. 

Read More

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ತಮ್ಮ ದೇಶದಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧ, ಗಲಾಟೆ, ಹಿಂಸೆ, ಸಾವು, ಮಿಲಿಟರಿ ಆಡಳಿತ ಎಂಬಂತೆ ಜೀವಹಾನಿಕಾರಕ ಪರಿಸ್ಥಿತಿಯಿದ್ದು ಜೀವ ರಕ್ಷಿಸಿಕೊಳ್ಳಲು ದೇಶ ಬಿಟ್ಟು ಬರುವ ಜನರು ಇತ್ತೀಚಿನ ದಶಕಗಳಲ್ಲಿ ಹೆಚ್ಚುತ್ತಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಉಲ್ಲಂಘನೆ ಎಂಬ ಕಾರಣವನ್ನು ಮುಂದೆ ಮಾಡಿಕೊಂಡು ಕೂಡ ಸಾವಿರಾರು ಜನರು ದೇಶ ತೊರೆದು ಬೇರೆ ಕಡೆ ಆಶ್ರಯವನ್ನು ಬೇಡಿಕೊಂಡು ಹೋಗುತ್ತಾರೆ. ಇವರು ‘ಅಸೈಲಮ್ ಸೀಕರ್’ ಎಂದು ಕರೆಸಿಕೊಳ್ಳುತ್ತಾರೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ

ಶುಭಕೃತ್ ಸಂವತ್ಸರವು ಅಡಿಯಿಟ್ಟಿದೆ. ಆದರೆ ಕಾಲವು ಅದೇ ಪ್ರಕಾರ ಒಳಿತುಕೆಡುಕುಗಳನ್ನು ಒಟ್ಟಿಗೆ ಕಟ್ಟಿಕೊಂಡು ಸಾಗುತ್ತಿದೆ.  ಪ್ರಕೃತಿ ವಿಕೋಪವೆಂಬ ಬೇವು, ಮಾನವೀಯತೆ ಎಂಬ  ಬೆಲ್ಲವನ್ನು  ಸಮಾನ ಮನಸ್ಸಿನಿಂದ ಸ್ವೀಕರಿಸಬೇಕಾಗಿದೆ. ಆಸ್ಟ್ರೇಲಿಯಾದಲ್ಲಿ  ಟೆನಿಸ್ ಪಟು ಆಶ್ ಬಾರ್ಟಿ ನಿವೃತ್ತಿಯ ಬೇಸರ. ಆದರೆ ಅವರ ಮುಂದಿನ ನಿರ್ಧಾರ ಖುಷಿ ಕೊಡುವುದು. ಪ್ರವಾಹವು ನೋವು ಕೊಡುವುದು. ಡಾ. ವಿನತೆ ಶರ್ಮ ಬರೆದ ಆಸ್ಟ್ರೇಲಿಯಾ ಪತ್ರದಲ್ಲಿ ಅಲ್ಲಿನ ಕ್ಷೇಮ ಸಮಾಚಾರಗಳನ್ನು ತಿಳಿಯೋಣ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ