Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ನ್ಯಾಯದ ವಿವಿಧ ಮುಖಗಳ ಕತೆಗಳು

ಇದ್ಯಾಕೆ ಹೀಗೆ ಎಂದು ಪ್ರಶ್ನಿಸಿಕೊಂಡರೆ ಆಸ್ಟ್ರೇಲಿಯಾದ ಪಾಳೆಗಾರಿಕೆ ಮತ್ತು ವಸಾಹತುಶಾಹಿ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ನಡೆದು ಹೋದ ಕರಾಳ ಚಾರಿತ್ರಿಕ ಘಟನೆಗಳು, ಅಬೊರಿಜಿನಲ್ ಜನರ ಮಾರಣಹೋಮ, ಅವರನ್ನು ಗುಲಾಮಗಿರಿಗೆ ಒಳಪಡಿಸಿದ್ದು, ಅವರ ಮಕ್ಕಳನ್ನು ಕದ್ದು ಬಲವಂತವಾಗಿ ಅವರಿಗೆ ‘ಸಂಸ್ಕೃತಿ ಪಾಠ’ ಕಲಿಸಿದ್ದು, ಬಿಳಿಯರ ಆಳ್ವಿಕೆ, ಆಡಳಿತ, ‘ವೈಟ್ ಆಸ್ಟ್ರೇಲಿಯಾ’ ಕಾಯಿದೆ/ಕಾನೂನು ಪಾಲನೆ, ಸಮಾಜದಲ್ಲಿ ಆಳವಾಗಿ…

Read More

ನಾವೆಲ್ಲರೂ ಜೊತೆಯಾಗಿದ್ದೀವಿ ಎನ್ನುವ ಈ ಹೊತ್ತು

ಕಳೆದ ಭಾನುವಾರ ಬೆಳಗ್ಗೆ ವಾರದ ದಿನಸಿ ಕೊಳ್ಳಲು ಮನೆಯಿಂದ ಹೊರಟ ನಮ್ಮ ಸಂಸಾರ ಅರ್ಧಂಬರ್ಧ ಖಾಲಿಯಾಗಿದ್ದ ಸೂಪರ್ ಮಾರ್ಕೆಟ್ಟಿನಿಂದ ಹಿಂದಿರುಗುವಷ್ಟರಲ್ಲಿ ಅಂದರೆ ಸುಮಾರು ಒಂದೂವರೆ ಗಂಟೆಯಲ್ಲಿ ನಾವು ಹೊರಟಿದ್ದ ರಸ್ತೆಗಳಲ್ಲಿ ಪ್ರವಾಹದ ನೀರು ತುಂಬಿಕೊಂಡು ಮನೆ ಸೇರಿಕೊಳ್ಳಲು ನಾವು ಆ ಇಳಿ ಮಧ್ಯಾಹ್ನ ಕಷ್ಟಪಡಬೇಕಾಯಿತು. ಕೊನೆಗೆ ಗೂಡು ಸೇರಿದಾಗ ಜೀವದ ಮೇಲೆ ಗೌರವವುಂಟಾಗಿತ್ತು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯ-ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಹಾಡುಪಾಡು

ಕೋವಿಡ್-೧೯ ವರ್ಷದಲ್ಲಿ ಓದುತ್ತಿದ್ದ ಕೆಲ ವಿದ್ಯಾರ್ಥಿಗಳು ರಜೆಗೆಂದು ತಮ್ಮೂರಿಗೆ (ದೇಶಕ್ಕೆ) ಹಿಂದಿರುಗಿ, ಇತ್ತ ವೈರಸ್ ಹಾವಳಿ ಹೆಚ್ಚಾಗಿ, ಅವರು ವಾಪಸ್ ಬರಲು ಆಗದೆ ತಮ್ಮ ಓದನ್ನು ಆನ್ಲೈನ್ ಮುಖಾಂತರ ಮುಂದುವರೆಸುವ ಫಜೀತಿಯಾಗಿತ್ತು. ಕೆಲವರು ಆಸ್ಟ್ರೇಲಿಯಾದಲ್ಲಿ ಇನ್ನೂ ಮನೆ ಬಾಡಿಗೆ ಕಟ್ಟುತ್ತಿದ್ದರು; ಸಾಮಾನು, ಸರಂಜಾಮುಗಳನ್ನು ಇಲ್ಲೇ ಇಟ್ಟಿದ್ದರು. ಪಾರ್ಟ್‌ ಟೈಮ್ ಕೆಲಸವಿದ್ದವರಿಗೆ ಕೆಲಸ ಹೋಯ್ತು. ವೀಸಾ ಮುಂದುವರೆಸಲು ಸರಕಾರ ಕೊಕ್ಕೆ ಹಾಕಿತು. ಡಿಗ್ರಿ ಮುಗಿಸಲೇ ಬೇಕು ಎನ್ನುವುದು ವಿದ್ಯಾರ್ಥಿ ವೀಸಾದ ಷರತ್ತು. ಡಾ.ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಅಬೊರಿಜಿನಲ್ ಗಳ ಭರವಸೆ, ಟೆನಿಸ್ ಮಿನುಗು ತಾರೆ ಆಶ್ ಬಾರ್ಟಿ

ಆಶ್ ಬಾರ್ಟಿ ಮೆಲ್ಬೋರ್ನ್ ನಗರದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಪಂದ್ಯವನ್ನು ಗೆದ್ದಾಗ ಅಪ್ಪಅಮ್ಮಂದಿರು, ಆಪ್ತ ಗೆಳತಿಯರು ಅಲ್ಲದೆ ಇವೊನ್ ಗೂಲಗೊಂಗ್ ಕಾಲಿ ಕೂಡ ಹಾಜರಿದ್ದರು. ಜೊತೆಗೆ ಹೆಸರಾಂತ ಆಸ್ಟ್ರೇಲಿಯನ್ ಅಬೊರಿಜಿನಲ್ ಅಥ್ಲೀಟ್ ಕ್ಯಾಥಿ ಫ್ರೀಮನ್ ಪ್ರೇಕ್ಷಕ ವೃಂದದಲ್ಲಿ ಕೂತು ಪಂದ್ಯವನ್ನು ವೀಕ್ಷಿಸಿದ್ದರು. ತಾನು ಆಟವಾಡಿದ ಸ್ಥಳದಲ್ಲೇ ಇವರೆಲ್ಲರನ್ನು ಕಂಡು ಅವರೆಲ್ಲನ್ನು ಅಪ್ಪಿಕೊಂಡದ್ದೇ ಒಂದು ಮಹಾನ್ ಸಂತೋಷದ ಕ್ಷಣವೆಂದು ಆಶ್ ಹೇಳಿದಳು. ಅಬೊರಿಜಿನಲ್ ಮನೆಮನೆಗಳಲ್ಲಿ ಎದ್ದ ಹರ್ಷೋದ್ಗಾರ ಇನ್ನೂ ಕೇಳುತ್ತಿದೆ. ಡಾ. ವಿನತೆ ಶರ್ಮಾ ಬರೆದ ಆಸ್ಟ್ರೇಲಿಯ ಪತ್ರ

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ