Advertisement
ವಿನಾಯಕ ಅರಳಸುರಳಿ

ವಿನಾಯಕ ಅರಳಸುರಳಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೋಕಿನ ಅರಳಸುರಳಿ ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟ್ಸ್ ಹುದ್ದೆ ನಿರ್ವಹಿಸುತ್ತಿದ್ದಾರೆ. ಸಣ್ಣ ಕಥೆ, ಲಲಿತ ಪ್ರಬಂಧ ಹಾಗೂ ಕವಿತೆಗಳನ್ನು ಬರೆದಿದ್ದು ‘ನವಿಲುಗರಿ ಮರಿ ಹಾಕಿದೆ' ಹೆಸರಿನ ಲಲಿತ ಪ್ರಬಂಧ ಸಂಕಲನ ಹಾಗೂ 'ಮರ ಹತ್ತದ ಮೀನು' ಕಥಾ ಸಂಕಲನಗಳು ಪ್ರಕಟವಾಗಿವೆ.

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು “ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ” ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ “ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ”
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಅವಳ ಹೆಸರು ಗೀತ…: ವಿನಾಯಕ ಅರಳಸುರಳಿ ಅಂಕಣ

ಇದೊಂದು ಚಿಕ್ಕ ಕಾಳಜಿ, ಉಳಿದವರೆಲ್ಲರ ಉಪೇಕ್ಷೆಯ ನಡುವೆ ಆಕೆ ಮೆರೆದ ಸಣ್ಣ ಸಮಯ ಪ್ರಜ್ಞೆ ಎಂದು ಅನಿಸಬಹುದೇನೋ? ಆದರೆ ನೂರಾರು ಕೆಲಸಗಳ ನಡುವೆ ಮುಳುಗಿದಾಕೆ ತನ್ನದಲ್ಲದ ಧಾವಂತಕ್ಕಾಗಿ ಅವನ್ನೆಲ್ಲ ಬದಿಗಿಟ್ಟು ಸ್ವತಃ ಆಕ್ಸಿಜನ್ ಅಳವಡಿಸಿದ ಬೆಡ್ಡನ್ನು ದೂಡಿಕೊಂಡು ಬರುವುದು ಎಷ್ಟು ವಿರಳ ಹಾಗೂ ದೊಡ್ಡ ಮಾನವೀಯತೆಯೆನ್ನುವುದು ತಿಂಗಳಾನುಗಟ್ಟಲೆ ಆಸ್ಪತ್ರೆಯಲ್ಲಿ ಕಳೆದ ಬಳಿಕವಷ್ಟೇ ಅರ್ಥವಾಗುವ ಸೂಕ್ಷ್ಮ ಸತ್ಯ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕಥೆಯಾದಳು ಸೀತಕ್ಕ… : ವಿನಾಯಕ‌ ಅರಳಸುರಳಿ ಅಂಕಣ

ಸೀತಕ್ಕನ ಗಂಡನಿಗೆ ಕೊನೆಗೊಂದು ದಿನ ಡಿಸ್ಚಾರ್ಜಾಯಿತು. ಮನೆಗೆ ಹೋದ ಮೇಲೂ ಸೀತಕ್ಕ ಆಗಾಗ ಕರೆ ಮಾಡುತ್ತಿದ್ದರು. ಆಕೆಯ ಬದುಕು ಮೂರು ನಿಮಿಷದಲ್ಲಿ ಕಂಡ ಎಪಿಸೋಡಿನಂತೆ ನನ್ನೆದುರು ಪ್ರಸಾರವಾಗುತ್ತಿತ್ತು.‌ ಊರಿನಲ್ಲಿ ಸೀತಕ್ಕನಿಗೆ ಅವಳದೇ ಆದ ಒಂದಷ್ಟು ಸ್ನೇಹಗಳಿದ್ದವು. ಆಕೆ ಮಾತ್ರ ಮಾಡಬಹುದಾದ, ಅರ್ಧ ಸಂಬಳದ ಕೆಲಸಗಳಿದ್ದವು. ಅದನ್ನು ಆಕೆಗೆ ಕೊಡುವ ಮನೆಯೊಡತಿಯರೇ ಆಕೆಯ ಸ್ನೇಹಿತೆಯರಾಗಿದ್ದರು. ಅವರ ಮನೆಗಳ ಪಾತ್ರೆ ತೊಳೆಯುತ್ತ, ಹೂಗಿಡಗಳಿಗೆ ನೀರು ಹಾಕುತ್ತ, ಯಾರದೋ ಹೂದೋಟದಲ್ಲಿ ಹೂವರಳಿಸುತ್ತ, ಅಂಗಳಕ್ಕೆ ಸಗಣಿ ನೀರು ಬಳಿಯುತ್ತಾ, ಹಬ್ಬಕ್ಕೆ ತೋರಣ ಕಟ್ಟುತ್ತಾ, ಅವರಾಗಿ ಕೊಟ್ಟರಷ್ಟೇ ತಾನೂ ಹೂ ಮುಡಿಯುತ್ತ ಇದ್ದಳು ಆ ಅಜ್ಜಿ.
ವಿನಾಯಕ‌ ಅರಳಸುರಳಿ ಅಂಕಣ “ಆಕಾಶ ಕಿಟಕಿ”

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ