Advertisement
ಡಾ. ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಕಿಲ್ಲಿಂಗ್ ಫೀಲ್ಡ್ ಮತ್ತು ಬುದ್ಧ; ಇದು ಕಾಂಬೋಡಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಹಿಂದಿನ ಕಾಲದಲ್ಲಿ ಬಹುತೇಕ ಜನರು ಅನಕ್ಷರಸ್ಥರಾಗಿದ್ದರು. ಆದರೆ ಅಕ್ಷರ ಜ್ಞಾನ ಇಲ್ಲದವರೂ ಸಹ ಸಾಂಪ್ರದಾಯಿಕವಾದ ಮಹಾಕಾವ್ಯಗಳ ಕಥಾನಕವನ್ನು ಅರ್ಥಮಾಡಿಕೊಂಡಿದ್ದರು. ಬುದ್ಧನ ಜಾತಕ ಕಥೆಗಳ ಪರಿಚಯ ಬಹುತೇಕರಿಗಿತ್ತು. ರೀವಾಂಗ್ ಪ್ರೆಂಗ್ ಎಂಬ ಜಾನಪದ ಕಥೆಗಳನ್ನೂ ಸಹ ಅರಿತುಕೊಂಡವರಿದ್ದಾರೆ. ಪಾಶ್ಚಿಮಾತ್ಯ ಸಾಹಿತ್ಯ ಜಗತ್ತಿಗೆ ಕಾಂಬೋಡಿಯಾ ತೆರೆದುಕೊಂಡದ್ದು ತೀರಾ ತಡವಾಗಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕಾಂಬೋಡಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಏಷ್ಯಾದ ಕಳೆದುಹೋದ ಜಗತ್ತು ಇಂಡೋನೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಂಡೋನೇಷ್ಯಾವು ನೂರಕ್ಕೂ ಹೆಚ್ಚು ಅಳಿವಿನಂಚಿನಲ್ಲಿರುವ ಜೀವಿಗಳಿಗೆ ನೆಲೆಯಾಗಿದೆ. ಏಷ್ಯಾದ ಕಳೆದುಹೋದ ಜಗತ್ತು ಎನ್ನುವ ವಿಶೇಷ ಹೆಸರನ್ನು ಹೊಂದಿದೆ ಇಂಡೋನೇಷ್ಯಾ. ಬೇರೆ ಕಡೆಗಳಲ್ಲಿ ಕಂಡುಬರದ, ಈಗಾಗಲೇ ಅಳಿದುಹೋದ ಅಪರೂಪದ ಜೀವಿಗಳು ಇಲ್ಲಿ ಕಂಡುಬರುತ್ತವೆ. ಸುಮಾತ್ರನ್ ಘೇಂಡಾಮೃಗ, ಒರಾಂಗ್-ಉಟಾನ್ಸ್, ಅನೋವಾ, ಸುಮಾತ್ರಾನ್ ಹುಲಿ, ಸಮುದ್ರ ಆಮೆಗಳು, ಟಾರ್ಸಿಯಸ್ ಟಾರ್ಸಿಯರ್, ಕೊಮೊಡೊ ಡ್ರ‍್ಯಾಗನ್, ಮೆರಾಕ್ ಮೊದಲಾದವು ಇಲ್ಲಿ ಕಾಣಸಿಗುವ, ಬೇರೆಲ್ಲೂ ಹೆಚ್ಚಾಗಿ ಕಾಣಸಿಗದ ಜೀವಿಗಳು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಇಂಡೋನೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಅರ್ಧ ಗದ್ದೆಯಲ್ಲಿ
ಮಾತ್ರವೇ ಎದ್ದುನಿಂತ
ಭತ್ತದ ಪೈರು
ಭಾಷಣದ ಮಧ್ಯೆ
ರಾಜಕಾರಣಿ
ಹರಿಸಿದ ಕಣ್ಣೀರು
ಮಕ್ಕಳು ಮೊಮ್ಮಕ್ಕಳು ನಗುನಗುತ್ತಾ
ಮನೆಗೆ ಮರಳಿದಂತೆ
ಏಕಾಂಗಿ ವೃದ್ಧನಿಗೆ
ಬಿದ್ದ ಕನಸು”-ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ