Advertisement
ಡಾ. ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಒಡೆದದ್ದನ್ನು ಇಡಿಯಾಗಿಸಿಕೋ ಮೆಕ್ಸಿಕೋ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ವಿಶ್ವದಲ್ಲಿ ಅತೀ ಹೆಚ್ಚು ಜ್ವಾಲಾಮುಖಿಗಳಿಗೆ ನೆಲೆಯಾಗಿರುವ ದೇಶ ಮೆಕ್ಸಿಕೋ. ರಾಷ್ಟ್ರದ ಹೆಚ್ಚಿನ ಪರ್ವತ ಪ್ರದೇಶಗಳಲ್ಲಿ ಜ್ವಾಲಾಮುಖಿಗಳು ಕಂಡುಬರುತ್ತವೆ. ಆಶ್ಚರ್ಯದ ಸಂಗತಿಯೆಂದರೆ, ವಿಶ್ವದ ಅತ್ಯಂತ ಚಿಕ್ಕ ಜ್ವಾಲಾಮುಖಿಯೂ ಇರುವುದು ಮೆಕ್ಸಿಕೋದಲ್ಲಿ. ಪ್ಯೂಬ್ಲಾ ಸಮೀಪದಲ್ಲಿರುವ ಕ್ಯುಕ್ಸ್ಕೊಮೇಟ್ ಜ್ವಾಲಾಮುಖಿಯ ಎತ್ತರ ಕೇವಲ 43 ಅಡಿ. ಇದು ಈಗ ನಿಷ್ಕ್ರಿಯವಾಗಿದೆ. 1910ರಲ್ಲಿ ಮೆಕ್ಸಿಕೋದಲ್ಲಿ ಕ್ರಾಂತಿ ನಡೆದಿತ್ತು. ಇದರ ಪರಿಣಾಮವನ್ನು ಈಗಿನ ಕಾಲಘಟ್ಟದಲ್ಲಿಯೂ ಕಾಣುವುದಕ್ಕೆ ಸಾಧ್ಯವಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಚಿ ಛೀ ಚೀನಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಅಂದವಾಗಿ ಬರೆಯುವ ಕಲೆಯಾದ ಕ್ಯಾಲಿಗ್ರಫಿ ಮತ್ತು ಚಿತ್ರಕಲೆಗಳ ಬಗ್ಗೆ ಚೀನಾದ ಜನರಿಗೆ ಅತೀವವಾದ ಆಸಕ್ತಿಯಿದೆ. ಚಿತ್ರಕಲೆ ಮತ್ತು ಕ್ಯಾಲಿಗ್ರಫಿ ಕಲೆಗಳು ಚೀನಾದಲ್ಲಿ ಒಂದಕ್ಕೊಂದು ಪೂರಕ ಎನ್ನುವಂತೆ ಬೆಳೆದುಕೊಂಡು ಬಂದಿವೆ. ವರ್ಣಚಿತ್ರವನ್ನು ರಚಿಸಿದ ಬಳಿಕ ಆ ವರ್ಣಚಿತ್ರಕ್ಕೆ ಸರಿಹೊಂದುವ ಕವಿತೆಯನ್ನು ಕಲಾತ್ಮಕವಾಗಿ ಬರೆಯಲಾಗುತ್ತಿತ್ತು. ಹೀಗೆ ಕ್ಯಾಲಿಗ್ರಫಿಯು ಚಿತ್ರಕಲೆಯ ಸೊಬಗನ್ನು ಹೆಚ್ಚಿಸುತ್ತಿತ್ತು. ಚಿತ್ರಕಲೆಗೆ ಅನುಗುಣವಾಗಿ ಕ್ಯಾಲಿಗ್ರಫಿ ಸ್ಪಂದಿಸುತ್ತಿತ್ತು. ಹಿಂದಿನ ಕಾಲದ ಚೀನೀಯರಿಗೆ ಅಕ್ಷರಗಳ ಬಗ್ಗೆ ವಿಪರೀತವೆನಿಸುವ ಮೋಹವಿತ್ತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಹಾಗೆಯೇ ಹಿಸುಕತೊಡಗಿದೆ
ಅದನು ಬಲವಾಗಿ
ಪಕಳೆ ಪಕಳೆಗಳು ಮುದ್ದೆಯಾಗುವಂತೆ
ಕೈಗೆ ತಾಕಿದ ಮುಳ್ಳು
ಚಿಮ್ಮಿಸಿದ ರಕ್ತ
ಬರೆಯಿತೊಂದು ಹೊಸ ಷರಾ
ನಿನ್ನ ಕುತ್ತಿಗೆಯನ್ನೇ
ಹಿಸುಕುತ್ತಿದ್ದೀಯೇ ಜೋಕೆ!
ನಿಜಕ್ಕೂ ಬೆಚ್ಚಿಬಿದ್ದೆ!” -ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಈಗಿನ ಕಾಲಘಟ್ಟದಲ್ಲಿ ಪೋಲಂಡ್‌ನ ಸಾಂಸ್ಕೃತಿಕ ಬಹುತ್ವ ಕ್ಷೀಣಿಸತೊಡಗಿದೆ. ನಗರಕೇಂದ್ರಿತವಾದ ಸಂಸ್ಕೃತಿಯೇ ಪ್ರಾಬಲ್ಯ ಮೆರೆಯುತ್ತಾ, ಎಲ್ಲರ ಜೀವನ ವಿಧಾನವನ್ನು ಅದೇ ಬಗೆಯಲ್ಲಿ ರೂಪಿಸತೊಡಗಿದೆ. ಪೋಲಂಡ್‌ನ ಆಧುನಿಕ ಮಾಧ್ಯಮಗಳೂ ಸಹ ಏಕರೂಪದ ಸಂಸ್ಕೃತಿಯೆಡೆಗೆ ಒತ್ತು ನೀಡುತ್ತಿವೆ. ಪೋಲಂಡ್‌ನ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಮನೋಭಾವದ ಕೆಲವರು ಜಾನಪದ ಸಂಸ್ಕೃತಿಯಲ್ಲಿ ಕಂಡುಬರುವ ಧಾರ್ಮಿಕ ಸಂಗತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಪೋಲಂಡ್‌ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ