Advertisement

Category: ಅಂಕಣ

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

Read More

ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ನಾವಿದ್ದ ಅಪಾರ್ಟ್‌ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್‌ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ