Advertisement

Category: ಪ್ರವಾಸ

ಆಪರೇಷನ್ ವಿಜಯ್ ನ ಜೀವಂತ ನೆನಪುಗಳು

ಹಾಲ್ ಆಫ್ ಫೇಂನಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲೇ ಒಂದು ಗ್ಯಾಲೆರಿ ತೆರೆದಿದ್ದಾರೆ. ಅಲ್ಲಿ ಕಾರ್ಗಿಲ್ ಯುದ್ಧಕ್ಕೆ ಬಳಸಲಾದ ಗನ್ನುಗಳನ್ನು ಇಡಲಾಗಿದೆ. ಮಾರ್ಗದರ್ಶನ ಮಾಡುತ್ತಿದ್ದ ಆ ಯೋಧ “ಈ ಗನ್ನ್ ಅನ್ನು ಕೈಯಲ್ಲಿ ಹಿಡಿದು ಫೋಟೋ ತೆಗೆಸಿಕೊಳ್ಳಿ” ಎಂದ. ನನ್ನ ಆನಂದಕ್ಕೆ ಮಿತಿಯೇಯಿರಲಿಲ್ಲ. ನಿಜಕ್ಕೂ ನಾನು ಆ ಘಳಿಗೆಯಲ್ಲಿ ವೈರಿಪಡೆಯನ್ನು ಸೆದೆಬಡಿದು ಬಿಡುತ್ತೇನೆ ಎನ್ನುವ ಭಾವದಿಂದ ಗನ್ನೊಂದನ್ನು ಕೈಗೆತ್ತಿಕೊಳ್ಳಲು ಹೋದೆ. ಉಹುಂ, ಆಗಲೇ ಇಲ್ಲ! ಎಷ್ಟೊಂದು ಭಾರವಿತ್ತು. ನಗರ ಜೀವನ ಶೈಲಿಗೆ ಹೊಂದಿಕೊಂಡ ನನ್ನ ತಾಕತ್ತು ಸೈನಿಕನ ಉಂಗುಷ್ಠವನ್ನೂ ಹೋಲಲು ಸೋತಿತು. ಕೊನೆಗೆ ಅಲ್ಲಿದ್ದ ಆ ಯೋಧ, ಗನ್ ಎತ್ತಿ ನನ್ನ ಕೈಯಲ್ಲಿ ತೂರಿಸಿದ, ಫೋಟೊ ಸೆರೆಹಿಡಿದ. ‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ ಇಲ್ಲಿದೆ.

Read More

ಕಲ್ಲಿನಲ್ಲಿ ಕಡೆದ ಆಲ್ಬಮ್‌, ತಾಡಿಪತ್ರಿ

ನಾನು ಮೊದಲು ಹೋಗಿದ್ದು ಬುಗ್ಗ ರಾಮಲಿಂಗೇಶ್ವರಕ್ಕೆ. ನಿತ್ಯ ಬರುವ ಭಕ್ತಾದಿಗಳನ್ನು ಬಿಟ್ಟರೆ ಹೆಚ್ಚು ಜನ ಇರಲಿಲ್ಲ. ವಿಜಯನಗರ ಶೈಲಿಯ ದೇವಾಲಯಗಳಲ್ಲಿ ಇರುವಂತೆ ಪ್ರವೇಶ ದ್ವಾರ ಎತ್ತರವಾಗಿದ್ದು, ಎರಡೂ ಬದಿಗಳಲ್ಲಿ ಗಂಗಾ, ಯಮುನೆಯರ ಶಿಲ್ಪಗಳಿಂದ ಕೂಡಿದೆ. ಇವು ಮಾನಸಿಕವಾಗಿ ನಮ್ಮನ್ನು ಗಂಗೆ, ಯಮುನೆಯರಿಂದ ಶುಚಿಗೊಳಿಸಿಕೊಂಡು ಒಳಕ್ಕೆ ಹೋಗುವ ಪ್ರತೀಕ. ದೇವಾಲಯದ ಪ್ರಶಾಂತತೆ ಹಾಗೂ ಅದರ ಬೃಹತ್‌ ಗಾತ್ರವನ್ನು ಕಂಡು ನನಗೆ ಒಂದು ಕಡೆ ಬೆರಗು ಜೊತೆಗೆ ಏನು ನೋಡಲಿ ಏನು ಬಿಡಲಿ ಅಂತ ಸ್ವಲ್ಪ ಹೊತ್ತು ತಲೆ ಕೆಟ್ಟ ನೊಣದ ಹಾಗೆ ಕ್ಯಾಮೆರಾ ಹಿಡಿದುಕೊಂಡು ಓಡಾಡಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ತಾಡಿಪತ್ರಿ ಎಂಬ ಅಪರೂಪದ ಜಾಗದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ದೇವಾಲಯಗಳ ಕಣಿವೆಯಲ್ಲಿ ಈಗ ಹಸಿರು ಚಿತ್ರಗಳು

ನಾನು ನೆಲೆಸಿರುವ ಜರ್ಮನಿ ಹಾಗೂ ಸುತ್ತಲಿನ ದೇಶಗಳ ಇತಿಹಾಸ ಬಹಳ ಸಪ್ಪೆ ಎನ್ನಿಸುತ್ತದೆ. ಇವರು ಅರಮನೆ ಎಂದು ಕರೆಯುವ ಕಟ್ಟಡಗಳನ್ನು ಮೀರಿಸುವ ಮನೆಗಳನ್ನು ನಮ್ಮ ದೇಶದಲ್ಲಿ ಈಗಿನ ರಾಜಕಾರಣಿಗಳು, ಉದ್ಯಮಿಗಳು ಹೊಂದಿದ್ದಾರೆ. ಇಷ್ಟು ವರ್ಷಗಳ ಪ್ರವಾಸದಲ್ಲಿ ನಮ್ಮ ಮೈಸೂರಿನ ಭವ್ಯ ಅರಮನೆಯಂತಹ ಮತ್ತೊಂದನ್ನು ಇಲ್ಲಿ ನೋಡಲಿಲ್ಲ. ಸಾವಿರಾರು ವರ್ಷಗಳ ಹಿಂದಿನ, ಗತ-ವೈಭವಗಳಿಂದ ಕೂಡಿದ ಇತಿಹಾಸ ಅತಿ ವಿರಳ. ಆದರೆ ಯೂರೋಪಿನ ದಕ್ಷಿಣಕ್ಕೆ ಚಲಿಸಿದಂತೆ ಗ್ರೀಕ್, ರೋಮನ್ ಸಾಮ್ರಾಜ್ಯಗಳ ಕುರುಹುಗಳು ಕಾಣುತ್ತಿದ್ದಂತೆ ಕಣ್ಣು, ಕಿವಿ ಅರಳಿಬಿಡುತ್ತದೆ. ಗುರುದತ್ ಅಮೃತಾಪುರ ಬರಹ

Read More

ಪ್ರಾರ್ಥನೆಯೊಂದೇ ಆಯ್ಕೆಯಾಗಿ ಉಳಿದಾಗ…

ಆ ದಿನ ಅಲ್ಲಿ ಹಾಗೆ ಆದಾಗ ಆಕೆಗೆ ಒಳಿತಾಗಲಿ ಎಂದು ಬಯಸಿದ್ದು ಅಲ್ಲಿದ್ದ ನೂರಾರು ಮನಸ್ಸುಗಳು. ಅನುಮಾನವೇ ಇಲ್ಲ. ಆದರೆ ನನ್ನ ಗಮನ ಆಕೆಯ ಇಬ್ಬರು ಹರೆಯದ ಹೆಣ್ಣುಮಕ್ಕಳಾದ ಶ್ರದ್ಧಾ ಮತ್ತು ಪೂಜಾರೆಡೆಗೆ ಇದ್ದದ್ದೂ ಸುಳ್ಳಲ್ಲ. ಇಡೀ ಗುಂಪಿನಲ್ಲಿ ಅವರಿಬ್ಬರಿಗೇ ಇಂಗ್ಲಿಷ್ ಬರುತ್ತಿದ್ದದ್ದು. ಸ್ವಂತ ತಾಯಿ ಕುಸಿದು ಬಿದ್ದಿದ್ದಾಳೆ. ಅಪ್ಪನಿಗೆ ದಿಗ್ಭ್ರಮೆಯಾಗಿದೆ. ಪುಟ್ಟ ತಮ್ಮ ಅಳುತ್ತಿದ್ದಾನೆ. ವಯಸ್ಸಾದ ನೆಂಟರಿಷ್ಟರೆಲ್ಲಾ ಆತಂಕಗೊಂಡಿದ್ದಾರೆ. ಡಾಕ್ಟರ್‌ಗಳು ಹತ್ತು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
“ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ವಿಮಾನ ಪ್ರಯಾಣದ ಒಂದು ಭಿನ್ನ ಅನುಭವವನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ

Read More

ಗಾಂಧಿತಾತನ ಜೊತೆಗೆ ಒಲಿವಿಯಾಳೂ ಸಿಕ್ಕಳು

ವಿದ್ಯಾರ್ಥಿಗಳು, ಕಲಾವಿದರು ತಮ್ಮ ಖರ್ಚು ಸರಿದೂಗಿಸಿಕೊಳ್ಳಲು ಹೀಗೆ ಸ್ವಯಂಸೇವೆ ಮಾಡುತ್ತಾರೆ ಮತ್ತು ಪಗಾರ ಪಡೆಯುತ್ತಾರೆ. ಬಹಳಷ್ಟು ಸ್ಮಶಾನಗಳಿಗೆ ಭೇಟಿ ನೀಡಿದ್ದೇನೆ. ಅವುಗಳು ಪಾರ್ಕ್‌ನಂತೆ ಬಳಸಲ್ಪಡುತ್ತವೆ. ಸ್ವಚ್ಛತೆ ಮತ್ತು ಮೌನವು ಮಾರ್ದನಿಸುತ್ತಿರುತ್ತವೆ. ಕೆಲವು ಕಡೆ ಸಮಯ ನಿಗಧಿಯಾಗಿರುತ್ತದೆ, ಆದರೆ ಬಹುಪಾಲು ಸ್ಮಶಾನಗಳಿಗೆ ಸಾರ್ವಜನಿಕರು ದಿನದ ಯಾವ ಸಮಯದಲ್ಲಿಯಾದರೂ ಹೋಗಬಹುದು, ಅಲ್ಲಿ ಕುಳಿತು ಸಮಯ ಕಳೆಯಬಹುದಾಗಿರುತ್ತದೆ.
ಅಂಜಲಿ ರಾಮಣ್ಣ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ