Advertisement

Category: ಅಂಕಣ

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು “ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ” ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ “ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ”
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಜೋಡಿಯ ಜೊತೆ, ಪ್ರಧಾನಿಯ ಮದುವೆ: ವಿನತೆ ಶರ್ಮ ಅಂಕಣ

ಕಾಸ್ಟ್ ಆಫ್ ಲಿವಿಂಗ್ ಮತ್ತು ದುಬಾರಿ ಮನೆ ಬಾಡಿಗೆ – ಗಮನದಲ್ಲಿಟ್ಟುಕೊಂಡು ಪ್ರಧಾನಿ ತಮ್ಮ ಮದುವೆಯನ್ನು ಸರಳವಾಗಿ, ಮನೆಯಂಗಳದಲ್ಲೇ ಮಾಡಿಕೊಂಡರು ಎಂದು ಕೆಲವರ ಮಾತು. ಅದು ಪ್ರಧಾನಿಯ ಅಧಿಕೃತ ನಿವಾಸ, ಅವರ ಸ್ವಂತ ಮನೆಯೇನಲ್ಲ, ಅಧಿಕೃತ ನಿವಾಸವನ್ನು ಹೀಗೆ ಬಳಸಿಕೊಂಡಿದ್ದಕ್ಕೆ ಅವರು ಬಾಡಿಗೆ ಕೊಡಬೇಕಾಗಿತ್ತು ಎಂದು ಕೂಡ ಚುಚ್ಚುಮಾತು ಎದ್ದಿದೆ. ಮಾಧ್ಯಮದವರು ಇದೆ ವಿಷಯವನ್ನು ಇಟ್ಟುಕೊಂಡು ವಿರೋಧಪಕ್ಷದ ನಾಯಕಿ ಸೂಸನ್ ಲೇ ಅವರನ್ನು ಪ್ರಶ್ನಿಸಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

 ಬದಲಾಗಿದೆ ಕನ್ನಡ ನಾಡು, ಡಿಜಿಟಲ್ ಕರ್ನಾಟಕದ ಹಾಡು ಪಾಡು: ಎಲ್.ಜಿ.ಮೀರಾ ಅಂಕಣ

ಇಪ್ಪತ್ತೊಂದನೇ ಶತಮಾನದ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲ ನಾಡುಗಳಂತೆ ನಮ್ಮ ಕನ್ನಡ ನಾಡು ಸಹ ಬದಲಾಗುತ್ತಿದೆ. ನಮಗೆ ಬೇಕೋ ಬೇಡವೊ ನಮಗೆ ಪರಿಚಿತವಾಗಿದ್ದ ಬದುಕಿನ ಲಯಗಳು ನಿಧಾನವಾಗಿ ಮರೆಯಾಗುತ್ತಾ, ಅಪರಿಚಿತ, ನೂತನ ಲಯಗಳು ನಮ್ಮ ದಾರಿಯಲ್ಲಿ ಪ್ರತ್ಯಕ್ಷವಾಗುತ್ತಿವೆ. `ಅಯ್ಯೋ, ಹೇಗಿದ್ದದ್ದು ಹೇಗಾಯ್ತಪ್ಪ! ಎಲ್ಲ ಹಾಳಾಗಿ ಹೋಯಿತಲ್ಲ! ಮನುಷ್ಯ ಪ್ರಪಂಚ ಇನ್ನು ಮುಳುಗಿ ಹೋಗುತ್ತೆ! ಪ್ರಳಯವಾಗುತ್ತೆ!!’ ಎಂದು ಗೋಳಾಡುತ್ತಾ ಕೂರುವುದು ವಿವೇಕದ ಆಯ್ಕೆಯಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೆರಡನೆಯ ಬರಹ

Read More

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ಆಧ್ಯಾತ್ಮಿಕ ಶಿಬಿರ-ಮಹಿಳೆಯರಿಗೆ: ಸುಕನ್ಯಾ ಕನಾರಳ್ಳಿ ಅಂಕಣ

ನಾನು ನೋಡಿದ್ದ ಒಂದು ಅದ್ಭುತ ತಾಳಮದ್ದಳೆ ನೆನಪಿಗೆ ಬಂತು. ಕೃಷ್ಣ ತಾನು ಸಂಧಾನಕ್ಕೆ ಹೋಗುವ ಮುನ್ನ ದ್ರೌಪದಿಯನ್ನು ಭೇಟಿ ಮಾಡುತ್ತಾನೆ. ತುಂಬಿದ ಸಭೆಯಲ್ಲಿ ತನಗೆ ಆದ ಅವಮಾನದ ಗತಿ ಏನು? ಬಿಚ್ಚಿದ ಮುಡಿಯ ಗತಿಯೇನು? ಈಗ ಆ ಗಂಡ ಧರ್ಮರಾಜ ನಿನ್ನನ್ನ ಸಂಧಾನಕ್ಕೆ ಕಳುಹಿಸುತ್ತಿದ್ದಾನೆ. ಯಾಕೆಂದರೆ ಅದು ಕೇವಲ ಹೆಣ್ಣಿಗಾದ ಅವಮಾನ ಅಲ್ಲವಾ ಕೃಷ್ಣ? ನೀನೂ ಆರಾಣೆ ಗಂಡಸಾಗಿಬಿಟ್ಟೆಯಾ? ಎಂದು ಚುಚ್ಚಿ ಕೇಳುತ್ತಾಳೆ. ಸುಮಾರು ಒಂದು ಗಂಟೆ ಅವರ ನಡುವೆ ಸಂವಾದ ನಡೆಯುತ್ತದೆ. ಅವರ ನಡುವಿನ ಆತ್ಮೀಯ ಸಲಿಗೆ, ಒಬ್ಬರಿಗೊಬ್ಬರು ಸ್ಪಂದಿಸುವ ರೀತಿ, ಚತುರ ಸಂಭಾಷಣೆಗಳನ್ನು ಬಿಟ್ಟ ಬಾಯಿ ಬಿಟ್ಟಂತೆಯೇ ನೋಡಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ