Advertisement

Category: ಅಂಕಣ

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ

ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ

Read More

ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ

ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…

ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ