Advertisement

Category: ಅಂಕಣ

ಬರವಣಿಗೆ ಎಂಬ ಅಫೀಮು

ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?

Read More

ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್‍ ಲ್ಯಾಂಡ್‍ನಲ್ಲಿ  ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.

Read More

ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದು‌ನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…

Read More

ಆತ್ಮಾವಲೋಕನ ಎಂಬುದೊಂದು ಯುದ್ಧ

ಪ್ರಸಿದ್ಧ ರಂಗಶಾಲೆಗಳಲ್ಲಿ ಕಲಿತು ಹೊರಬರುವವರು ಮಿಕ್ಕವರಿಗಿಂತ ಒಂದು ಸ್ತರದ ಮೇಲೆ ಇರುತ್ತಾರೆ. ಯಾಕೆಂದರೆ ಅವರನ್ನು ಹಾಗೆ ತರಬೇತುಗೊಳಿಸಿರಲಾಗುತ್ತದೆ. ಅವರಿಗೆ ರಂಗಪಠ್ಯವನ್ನು ಅಭ್ಯಾಸ ಮಾಡಿಸುವ ಕ್ರಮವೇ ಬೇರೆ. ನಟನೆ ಮತ್ತು ನಟರ ಆಯ್ಕೆ ನಂತರದ ಕೆಲಸ. ಮೊದಲು ರಂಗಪಠ್ಯದ ಸಾರಸರ್ವದ ಬಗ್ಗೆ ಚರ್ಚೆಗಳು ಆರಂಭವಾಗುತ್ತವೆ. ಆ ರಂಗನಾಟಕ ರೂಪಕವಾಗಿ ಅರಳಿಕೊಂಡಿರುವ ಬಗೆಯನ್ನು ಬೆರಗಿನಲ್ಲಿ ಅರ್ಥೈಸಲಾಗುತ್ತದೆ. ನಂತರ ಪ್ರತಿಯೊಂದು ಪಾತ್ರ, ಅದರ ಅನನ್ಯತೆಯನ್ನು ವಿವರಿಸಲಾಗುತ್ತದೆ. ಚಿಕ್ಕ ಪಾತ್ರ ದೊಡ್ಡ ಪಾತ್ರದ ವರ್ಗೀಕರಣವನ್ನು ಮೊದಲು ಇಲ್ಲವಾಗಿಸುತ್ತಾರೆ.
ಎನ್.ಸಿ. ಮಹೇಶ್‌ ಬರೆಯುವ ರಂಗ ವಠಾರ ಅಂಕಣ

Read More

ಕ್ಷಮೆ ಎಂಬ ಕನ್ನಡಿ…

‘ಡು ಐ ಹೇಟ್ ಮೈಸೆಲ್ಫ್?’ ಎಂದೆಲ್ಲಾ ಅನ್ನಿಸಲು ಶುರುವಾದರೂ ಬಲವಂತವಾಗಿ ಇಂತಹ ಯೋಚನೆಗಳನ್ನು ಅದುಮಿಟ್ಟೆ. ಇದೆಲ್ಲದರಿಂದ ಹೊರಬರಲು ಸಿನಿಮಾ ನೋಡುವುದೇ ಸೂಕ್ತ ಎಂದುಕೊಂಡು ಅವಳಲ್ಲಿ ಪ್ರಸ್ತಾಪಿಸಿದರೆ ಅವಳು ಒಲ್ಲದ ಮನಸ್ಸಿನಿಂದಲೇ ಸಮ್ಮತಿಸಿದಳು. ಸಿನಿಮಾದಲ್ಲಿ ಪ್ರತಿ ಪಾತ್ರಕ್ಕೆ ಅವಳು ತನ್ನನ್ನು, ರಘು ಮತ್ತು ಪೀಟರನಿಗೆ ಹೋಲಿಸಿಕೊಂಡು ಅದು ತನ್ನದೇ ಕಥೆಯಂತೆ ಭಾವಿಸಿ ಒಂದು ಭ್ರಮಾತ್ಮಕ ಸ್ಥಿತಿಗೆ ತಲುಪಿದಂತೆ ಕಾಣುತ್ತಿದ್ದಳು. ಯಾಕೋ ನನಗೆ ಹಿಂಸೆಯಾಗತೊಡಗಿತು. ನನ್ನ ಮಾನಸಿಕ ಸ್ಥಿಮಿತವನ್ನೇ ತಾನು ಕಳೆದುಕೊಳ್ಳುತ್ತಿದ್ದೇನೆ ಎನ್ನಿಸಲು ಶುರುವಾಯಿತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ