Advertisement

Category: ದಿನದ ಪುಸ್ತಕ

ಒಳದನಿಗೆ ಕಿವಿಯಾಗುವ ಕವಿತೆಗಳು: ಆನಂದ ವಿ. ಪಾಟೀಲ ಬರಹ

“ಮಹಾಶೂನ್ಯದ ಮಹಾಶೂನ್ಯತ್ವ ಮಹಾಸಾಗರದಲಿ/ಪ್ರತಿಯೊಬ್ಬರೂ ಒಂಟಿ!’ ಎನ್ನುವ ಅಖೈರು ಸತ್ಯ ಇಷ್ಟು ಬೇಗನೆ ಕೈಗೆ ಬಂತೆ ಅಚ್ಚರಿಯನ್ನುಂಟು ಮಾಡುತ್ತದೆ. ಬಹಳಷ್ಟು ಸಲ ಇಲ್ಲಿನ ಕವಿತೆ ಆಂತರ್ಯಕ್ಕೆ ಲಗ್ಗೆ ಇಟ್ಟುದೇ ಆಗಿದೆ ಅನ್ನಿಸಿತು. ಹಾಗಿರುವಾಗ ಅದು ಗುಂಗಾಗಿ ಕಾಡುತ್ತಿದೆಯಾ ಎಂತಲೂ ಗುಮಾನಿಯಾಗಿ ಕಾಡುವಂತೆ ಇಲ್ಲಿನ ಸಾಲುಗಳು ಕಾಣುತ್ತವೆ.
ಸುಮಿತ್‌ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಆನಂದ ವಿ. ಪಾಟೀಲ ಬರಹ

Read More

ಮೌಲ್ಯಗಳನ್ನು ಎತ್ತಿ ಹಿಡಿವ ಕಾದಂಬರಿ: ಕೆ.ಆರ್.ಉಮಾದೇವಿ ಉರಾಳ ಬರಹ

ಕೌಟುಂಬಿಕ ಜೀವನದ ಮಹತ್ವ, ಇತರರನ್ನು ಕ್ಷಮಿಸುವಂತೆಯೇ ನಮ್ಮನ್ನೇ ನಾವು ಕ್ಷಮಿಸಿಕೊಳ್ಳುವುದರ ಮಹತ್ವವನ್ನು ಮನಗಾಣಿಸಿದರು, ಗುರುಗಳು. ಸಮಾಜದಲ್ಲಿ ನಮ್ಮಲ್ಲಿರುವ ಭಿನ್ನತೆಗಳನ್ನು ಅನಗತ್ಯವಾಗಿ ಉತ್ಪ್ರೇಕ್ಷಿಸಿ ಶ್ರೀಮಂತ ಬಡವ ಸ್ತ್ರೀ ಪುರುಷ ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಬ್ರಾಹ್ಮಣ ದಲಿತ ಎಂದೆಲ್ಲಾ ಅಡ್ಡ ಗೋಡೆಗಳನ್ನು ಕಟ್ಟಿಕೊಳ್ಳುವುದಕ್ಕಿಂತ ಭಿನ್ನತೆ ಪ್ರಭೇದತೆಗಳು ಸಮಾಜದ ಲಕ್ಷಣ ಎಂದರಿತು ನಮ್ಮಲ್ಲಿರುವ ಸಾಮ್ಯತೆಗಳನ್ನು ಗುರುತಿಸುತ್ತಾ ಇಡೀ ಜಗತ್ತೇ ನಮ್ಮ ಕುಟುಂಬ ಎಂಬ ಪ್ರೀತಿ ಬೆಳೆಸಿಕೊಳ್ಳಬೇಕಾದ ಮಹತ್ವವನ್ನು ಮನಗಾಣಿಸುತ್ತಾರೆ.
ದೀಪ್ತಿ ಎಸ್. ರಾವ್ ಬರೆದ “ಸಾವಿನಂಚಿನ ಸಂವಾದ” ಕಾದಂಬರಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ

Read More

ಸೀತಾಲಕ್ಷ್ಮಿಯ ಬದುಕಿನ ಸುತ್ತ…: ವಸುಮತಿ ಉಡುಪ ಕಾದಂಬರಿಯ ಪುಟಗಳು..

ತಂಬುಳಿಗೆ ಕಲೆಸಿದ್ದ ಅಷ್ಟೂ ಅನ್ನವನ್ನು ಬದಿಗೆ ದೂಡಿ ಹುಳಿಗೆ ಅನ್ನ ಕಲೆಸಲು ಸನ್ನದ್ಧನಾದ ಶಿವರಾಮ. ಹುಳಿ ಬಡಿಸಲು ಬಂದ ಸೀತಾಲಕ್ಷ್ಮಿಯ ಕೈಗಳು ಅಕ್ಷರಶಃ ನಡುಗುತ್ತಿದ್ದುವು. ತನ್ನ ತೌರಿನಲ್ಲಿ ಇಂತಾದ್ದೆಲ್ಲಾ ಕಂಡು ಗೊತ್ತಿಲ್ಲದ ಹುಡುಗಿಗೆ ದಿಗಿಲು, ದುಃಖ. ವಾಸ್ತವವಾಗಿ ಇದು ತನ್ನ ತಲೆಕೂದಲು ಎಂದು ಅವಳಿಗೆ ಅನುಮಾನ. ಮಂಗಳವಾರ ಅವತ್ತು. ಸೀತಾಲಕ್ಷ್ಮಿ ಅತ್ತೆ ಹೇಳಿದಂತೆ ತಲೆಗೆ ಎರೆದುಕೊಂಡಿದ್ದಳು. ಒದ್ದೆ ತಲೆಕೂದಲನ್ನು ಪಾಣಿಪಂಚೆಯಿಂದ ವರೆಸಿಕೊಂಡು ತುದಿಗಂಟು ಹಾಕಿಕೊಂಡಿದ್ದರೂ ಉಟ್ಟ ಸೀರೆಯ ಮೇಲೆ ಕೂದಲು ಉದುರಿ ಬಿದ್ದಿರಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ವಸುಮತಿ ಉಡುಪ ಬರೆದ ಕಾದಂಬರಿ “ಅಂತಃಪುರ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್‌ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್‌ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್‌ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ

Read More

ಸಫಲತೆಯ ಸಂದೇಶದ ಕವಿತೆಗಳು: ತೇಜ ಎಸ್. ಬಿ. ಬರಹ

ಅಕ್ಕ, ಜೋಗತಿ ಮಂಜಮ್ಮ, ಪದವಿ, ಅವ್ವ, ಮಗು, ಸಮಾನಳು ಮುಂತಾದ ಕವಿತೆಗಳು ಜೀವ-ಭಾವ ತುಂಬಿ ಮಹಿಳೆಯರ ಜೀವನದ ಬಗ್ಗೆ ಚಿತ್ರಿಸಿವೆ. ಮುಂತಾಗಿ ನನಗಾರು ಸಾಟಿ, ತಮಟೆ, ಕಣ್ಣಾಮುಚ್ಚೆ ಕಾಡೆ ‘ಗೋಡೆ’ ಬೆಂಗಳೂರಿನ ಮಗ ಸಂಭಾಷಣೆಯೇ ಇಲ್ಲದಂತೆ ಕಾಡುವುದಂತೂ ಸಹಜ. ಪುಸ್ತಕ ಓದಲು ಹೆಚ್ಚೇನು ಸಮಯ ತೆಗೆದುಕೊಳ್ಳಲಿಲ್ಲ, ಆದರೆ ಅವು ನಮ್ಮಲ್ಲಿ ಹುಟ್ಟುಹಾಕಿದ ಪ್ರಶ್ನೆಗಳನ್ನು, ಭಾವಗಳನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ಬೇಕಾಯಿತು…
ವಿಕ್ರಮ್‌ ಬಿ.ಕೆ. ಕವನ ಸಂಕಲನ “ನಾವಿಬ್ಬರೇ ಗುಬ್ಬಿ” ಕುರಿತು ತೇಜ ಎಸ್. ಬಿ. ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ