Advertisement

Category: ಪ್ರವಾಸ

ಗಗನಚುಂಬಿ ಬೆಟ್ಟಗಳ ಸಂದಿಯಲ್ಲಿ ಬುದ್ಧಗಂಟೆಯ ಸದ್ದು

ನದಿ, ಜಲಪಾತಗಳೆಲ್ಲಾ ಹೆಪ್ಪುಗಟ್ಟಿದ್ದ ಚಳಿಗಾಲದಲ್ಲೊಮ್ಮೆ ನಾನು ಚೀನಾದ ದಟಾಂಗ್ ಎನ್ನುವ ಊರಿನಲ್ಲಿದ್ದೆ. ಇದು ಉತ್ತರ ಚೀನಾದ ಶಾಂಕ್ಷಿ ಪ್ರಾಂತ್ಯದಲ್ಲಿದೆ, ಇದರ ಸುತ್ತಮುತ್ತ ಯುನೆಸ್ಕೋ ತಾಣಗಳೂ ಸೇರಿದಂತೆ ಅನೇಕ ಪ್ರಾಚೀನ ಬೌದ್ಧತಾಣಗಳಿವೆ. ಅಲ್ಲೊಂದು ಹಳೆಯ ಬೌದ್ಧವಿಹಾರ. ಬೋಳುಬೆಟ್ಟಗಳ ಜೊತೆ ತಾನೂ ಒಂದಾಗಿರುವಂತೆ ತೋರುವ ಆ ವಿಹಾರ ನೆಲದಿಂದ ೭೫ ಮೀ ಎತ್ತರದಲ್ಲಿ ಬೆಟ್ಟದ ಮೇಲ್ಮೈನಲ್ಲಿ ೧೫೦೦ ವರ್ಷಗಳಿಂದ ಬೀಳದೆ, ಅಲ್ಲಾಡದೆ, ಮಳೆಗೆ ಜಗ್ಗದೆ, ಬಿಸಿಲಿಗೆ ಕುಗ್ಗದೆ, ಹಿಮಕ್ಕೆ ಕರಗದೆ, ಗಾಳಿಗೆ ಹಾರಿ ಹೋಗದೆ ಹಾಗೇ ಉಳಿದುಕೊಂಡು ನಮ್ಮಂತಹ ನೋಡುವ ಕಣ್ಣಿಗೆ ವಿಸ್ಮಯವಾಗಿ ಉಳಿದುಬಿಟ್ಟಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

Read More

ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ಇಂಡೋ-ಪಾಕ್ ಸರಹದ್ದು ನೋಡಲೇ ಬೇಕು ಎನ್ನುವ ಆಸೆ ಗುದ್ದತೊಡಗಿತು. ದೇಶಭಕ್ತಿ ಮರುಭೂಮಿಯ ಓಯಸಿಸ್ನಂತೆ ಚಿಮ್ಮುತ್ತಿತ್ತು. ಕಾಲೇಜು ದಿನಗಳಲ್ಲಿ ಎನ್.ಸಿ.ಸಿ ಜಲಸೇನೆ ವಿಭಾಗದಲ್ಲಿದ್ದೆ. ಹಿಂದೂ ಮಹಾಸಾಗರವನ್ನು ಉದ್ದಗಲಕ್ಕೂ ಈಜಿ ವರಾಹವತಾರವೆತ್ತಿ ಭಾರತ ಮಾತೆಯನ್ನು ರಕ್ಷಿಸಿಕೊಂಡು ಬಂದ್ಹಾಗೆ ಕಂಡಿದ್ದ ಕನಸು ನೆನಪಾಗುತ್ತಲೇಯಿತ್ತು. ದೇಶ ಭಕ್ತಿಯೊಂದೇ ಸ್ಥಾಯಿ ಭಾವ ಅಂದುಕೊಂಡು ಅಲ್ಲಿದ್ದ ಸೈನಿಕರನ್ನು ನೋಡುತ್ತಾ ತನ್ನೋಟಿ ಮಾತಾಳನ್ನು ‘ಬಾರ್ಡರ್ ಗೆ ಕರೆದುಕೊಂಡು ಹೋಗು ‘ ಎಂದು ಬೇಡಿಕೊಳ್ಳುತ್ತಿದ್ದೆ.‌ ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಬರಹ.

Read More

ಜ್ವಾಲಾಮುಖಿಯ ತಪ್ಪಲು ಜೀವನ್ಮುಖಿ

ಕಾರಿನ ಪಯಣದಲ್ಲಿ ನೋಡಿದ್ದು ಎಟ್ನಾ ಪರ್ವತದ ಐದು ಸೂಕ್ಷ್ಮ ವಲಯಗಳನ್ನು. ಜ್ವಾಲಾಮುಖಿಯ ತಪ್ಪಲಿನ ಜಾಗ ವ್ಯರ್ಥ ಭೂಮಿಯೆಂದು ಭಾವಿಸಿದ್ದ ನನಗೆ ಇದೊಂದು ಆಶ್ಚರ್ಯಕರ ಸಂಗತಿಯಾಗಿತ್ತು. ಈ ಪರ್ವತದ ಮಣ್ಣಿನ ಫಲವತ್ತತೆ ಹೆಚ್ಚಿರುವುದರಿಂದ ಇಲ್ಲಿನ ಕೃಷಿ ಉತ್ಪನ್ನಗಳಿಗೆ ಪ್ರಪಚದಾದ್ಯಂತ ಒಂದು ಗರಿಮೆಯಿದೆ. ನನ್ನ ಕಲ್ಪನೆಗೆ ಇದು ತದ್ವಿರುದ್ಧವಾಗಿತ್ತು. ಪರ್ವತದ ತಪ್ಪಲಿನ ಕೆಳ ಹಂತದಲ್ಲಿ ಕಿತ್ತಳೆ, ಗಜ ನಿಂಬೆ ಬೆಳೆಯುತ್ತಾರೆ.
ಸಿಸಿಲಿಯನ್‌ ಓಡಾಟದ ಮತ್ತಷ್ಟು ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಹಂಚಿಕೊಂಡಿದ್ದಾರೆ.

Read More

ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಬೆಟ್ಟದ ದಾರಿ. ಸಂಜೆಯಾಗುವ ಮೊದಲೇ ಮೇಲೇರಬೇಕು ಎನ್ನುವ ಧಾವಂತದಲ್ಲೇ ಹೊರಟೆ. ಇಕ್ಕೆಲಗಳಲ್ಲೂ ಅರಾವಳಿ ಪರ್ವತಶ್ರೇಣಿಯ ಸ್ನಿಗ್ಧ ಸೌಂದರ್ಯಾಸ್ವಾದನೆ. ಸ್ವಪ್ನಲೋಕದ ದಾರಿಯಲ್ಲಿ ಪಯಣಿಸಿ ಸೂರ್ಯಾಸ್ತದ ವೇಳೆಗೆ ತಲುಪಿದ್ದು ಸಮುದ್ರಮಟ್ಟದಿಂದ 1200 ಮೀಟರುಗಳಷ್ಟು ಮೇಲಿರುವ, ಬೇಸಿಗೆ ಅರಮನೆಗಳ ನಗರ ಮೌಂಟಬುವನ್ನು. ಥಾರ್ ಮರುಭೂಮಿಯ ಈ ನಾಡಿಗೆ ಉಣ್ಣೆ ಬಟ್ಟೆಯನ್ನು ಹೊತ್ತಿ ಹೋಗುವ ಕಲ್ಪನೆಯೂ ನನಗಿರಲ್ಲಿಲ್ಲ. ಆದರೆ ಕಾಲಿಟ್ಟೊಡನೆ ಮೈನಡುಗಿಸಿತ್ತು ಅಲ್ಲಿನ ಹವೆ.
‘ಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ