Advertisement

Category: ಪ್ರವಾಸ

ಶ್ರೀಕೃಷ್ಣ ದೇವರು ತಂದ ಪಾರಿಜಾತದ ಗಿಡವಿದು

ಲಕ್ನೋಗೆ ಹೊರಟು ನಿಂತಾಗ ಒಂದು ವಿಷಯವನ್ನು ಗೂಗಲ್ ಹೇಳಿತು: ಕೃಷ್ಣ ಸ್ವರ್ಗದಿಂದ ಸತ್ಯಭಾಮೆಗೆಂದೇ ಭೂಮಿಗೆ ತಂದ ಪಾರಿಜಾತದ ಗಿಡ ಈಗಲೂ ಇದೆ ಎಂದು ಸೂಚಿಸಿತು.  ಲಕ್ನೋದಿಂದ ಕೇವಲ 40 ಕಿಲೋಮೀಟರ‍್ಗಳ ದೂರದಲ್ಲಿ ದೊಡ್ಡ ಬಲುದೊಡ್ಡ ಮರವಾಗಿ ಎಂದು ಗೊತ್ತಾಯಿತು.  ಸರಿ ಮತ್ತೆ, ಇಬ್ಬರು ಹೆಂಡಿರ ಜಗಳದಲ್ಲಿ ಭೂಲೋಕಕ್ಕೆ ಇಳಿದು ಬಂದ ವಿಷಯ ಎಂದರೆ ಕುತುಹಲ ಇರದಿರಲು ಸಾಧ್ಯವೇ ? ಆ ಪುರಾತನ ಮರವನ್ನು ನೋಡಿದರೆ ಅದರ ಪಕ್ಕ ಸತ್ಯಭಾಮೆಯ ಮಂದಿರಕ್ಕೆ ಬದಲಾಗಿ ರುಕ್ಮಿಣಿದೇವಿ ಮಂದಿರವಿದೆ.

Read More

ಲ್ಯಾಪ್ಲ್ಯಾಂಡ್: ಒಂದು ಕನಸಿನ ಪಯಣ

ನೋಡನೋಡುತ್ತಿದ್ದಂತೆ ಲ್ಯಾಪ್ಲಾಂಡ್ ಪ್ರವಾಸದ ದಿನ ಬಂದೆ ಬಿಟ್ಟಿತು. ಮ್ಯುನಿಕ್‌ನಿಂದ ಹೆಲ್ಸಿಂಕಿಗೆ ವಿಮಾನ. ಫಿನ್ಲ್ಯಾಂಡ್ ರಾಜಧಾನಿಯಾದ ಹೆಲ್ಸಿಂಕಿ ಬಾಲ್ಟಿಕ್ ಸಮುದ್ರ ತೀರದ ಒಂದು ನಗರ. ಹೆಲ್ಸಿಂಕಿ ಹತ್ತಿರ ಹತ್ತಿರ ಬರುತ್ತಿದ್ದಂತೆ ಬಾಲ್ಟಿಕ್ ಸಮುದ್ರವೂ ಹೆಪ್ಪುಗಟ್ಟಿದ ದೃಶ್ಯಗಳು ವಿಮಾನದೊಳಗೆ ಕೂತಿದ್ದ ನನ್ನ ಬೆನ್ನುಹುರಿಯಲ್ಲಿ ನಡುಕ ಹುಟ್ಟಿಸಿತು! ದೊಡ್ಡ ಹಡಗೊಂದು ಹೆಪ್ಪುಗಟ್ಟಿರುವ ಹಿಮವನ್ನು ಸೀಳಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ.
‘ದೂರದ ಹಸಿರು’ ಸರಣಿಯಲ್ಲಿ ಲಾಪ್ಲ್ಯಾಂಡ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಗುರುದತ್‌ ಅಮೃತಾಪುರ

Read More

ಬಾಬ್ಬಿ ಎಂಬ ಪ್ರೇಮದ ಕುರುಹನ್ನು ಹುಡುಕಿಕೊಂಡು…

ತಲೆಯೊಳಗೆ ಬಲ್ಬಿನ ಥಕಪಕ ಕುಣಿತ. ‘ಅರೆ, ಇವನು ಅವನೇ ಅಲ್ವಾ? ಎಲ್ಲಿದ್ದಾನೆ? ನಾನು ಯಾಕೆ ಅವನನ್ನು ನೋಡದೆಯೇ, ಭೇಟಿ ಮಾಡದೆ ವಾಪಸ್ಸು ಬಂದುಬಿಟ್ಟೆ? ಛೆ ಛೆ, ಅವನೂರಿಗೆ ಬಂದು ಅವನನ್ನು ಮುದ್ದು ಮಾಡದೆ, ಅಪ್ಪಿಕೊಳ್ಳದೆ… ಓಹ್…’ ಸ್ವಾಗತ ಕೊಠಡಿಗೆ ಕರೆ ಮಾಡಿದೆ. ಅವನ ವಿಳಾಸ ಸಿಕ್ಕಿತು. ಅಯ್ಯೋ, ಅವನನ್ನು ನೋಡದೆಯೇ ಆ ರಾತ್ರಿ ಕಳೆಯಬೇಕಿತ್ತು. ಸೂರ್ಯ ಕರೆಗಂಟೆ ಒತ್ತಿದ್ದೆ ತಡ, ಗಡಿಬಿಡಿಸಿಕೊಂಡು ಬೆಚ್ಚನೆಯ ಬಟ್ಟೆ ತೊಟ್ಟು ಅವನಲ್ಲಿಗೆ ಓಡತೊಡಗಿದೆ.
‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಬಾಬ್ಬಿ…

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ  ಇತಿಹಾಸವನ್ನೂ ಅರಿಯುವ ಕುತೂಹಲ  ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ