Advertisement

Category: ಸಾಹಿತ್ಯ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹೋಗಿದ್ದಾಳೆ. ಆದರೂ ಅವಳ ಮುಖದ ಮೇಲಿನ ಕಾಂತಿ ಇನ್ನೂ ಒಂದಷ್ಟು ಉಳಿದುಕೊಂಡಿದೆ. ಅವಳ ಗಂಡ ಚಿನ್ನದ ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಜ್ಞಾಪಕದಂತೆ ಅವಳ ಕಿವಿಗಳಲ್ಲಿ ಚಿನ್ನದ ಓಲೆಗಳು ಕಾಣಿಸುತ್ತಿವೆ. ವಾರ್ಡ್‌ನ ಎರಡೂ ಕಡೆ ಗೋಡೆಗಳ ಪಕ್ಕ ಸಾಲಾಗಿ ಹಾಸಿರುವ ಹಾಸಿಗೆಗಳ ಮೇಲೆ ಗಣಿ ಕಾರ್ಮಿಕರು ಹಾಸಿಗೆಗಳಲ್ಲಿ ಕುಳಿತು ಮಲಗಿ ಮಾತನಾಡುತ್ತಿದ್ದಾರೆ. ಈ ವಾರ್ಡ್‌ನಲ್ಲಿ ಬರೀ ಗಣಿ ರೋಗಗಳಿಂದ ಬಳಲುತ್ತಿರುವ ಕಾರ್ಮಿಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ನನಸಾಗದ ಕನಸುಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ವಿಜಯ ಮತ್ತು ಅಯ್ಯಪ್ಪನಿಗೆ ವಿಷಯದ ಗಾತ್ರ ಅರ್ಥವಾಯಿತು. ಕನಕ ಟೀ ಮಾಡಿಕೊಟ್ಟು ಕುಡಿದರು. ಅಷ್ಟರಲ್ಲಿ ಮಣಿ ಬಂದ. ಸಮತಿಯನ್ನು ಕರೆದು ಒಂದು ತಟ್ಟೆಯಲ್ಲಿ ತೆಂಗಿನಕಾಯಿ ಜೊತೆಗೆ ಎಲ್ಲವನ್ನು ಇಟ್ಟು ಕೊಟ್ಟಳು. ವಿಜಯ ತೆಗೆದುಕೊಳ್ಳುತ್ತ ಈಹೊತ್ತಿನಿಂದ “ನೀವು ನಾವು ನೆಂಟರಾದೆವು” ಎಂದಳು. ಸುಮತಿ ಎಲ್ಲವನ್ನೂ ಒಂದು ಸಣ್ಣ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಟ್ಟಳು. ವಿಜಯ, ಸುಮತಿಯನ್ನು ನೋಡುತ್ತ ಮನಸ್ಸಿನಲ್ಲಿ ಏನೋ ಲೆಕ್ಕಾಚಾರ ಹಾಕಿಕೊಳ್ಳುತ್ತಾ ಹಾಗೇ ಕುಳಿತುಕೊಂಡಿದ್ದಳು. ಅಯ್ಯಪ್ಪ, “ಹೋಗೋಣವ?” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ