Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ

ಅಪ್ಪ- ಮಗ ಮತ್ತೆ ಎಂದಿನಂತೆ ಕೂದಲು ಕತ್ತರಿಸಿಕೊಳ್ಳಲು ಹೋದರು. ಅಲ್ಲಿಗೆ ಹೋದಾಗ ಪ್ರಭಾತ ಅವಾಕ್ಕಾದ. ಯಾವಾಗಲೂ ಕಚಾಕಚ್‌ ತುಂಬಿರುತ್ತಿದ್ದ ಮನಿಷಾ ಹೇರ್‌ ಆರ್ಟ್‌ ಖಾಲಿಯಾಗಿತ್ತು. ಅದರ ಗಾಜುಗಳೆಲ್ಲ ಛಿದ್ರವಾಗಿ ಅವಶೇಷಗಳು ಮಾತ್ರ ಕಾಣುತ್ತಿದ್ದವು. ಒಂದೇಒಂದು ಕನ್ನಡಿ, ಒಂದು ಎತ್ತರದ ಕುರ್ಚಿ ಹಾಗೂ ನೆಲದ ಮೇಲೆ ಕುಕ್ಕರಗಾಲಿನಲ್ಲಿ ಕೂತಿದ್ದ ಕಳಾಹೀನ ಮುಖದ ಒಂಟಿ ವ್ಯಕ್ತಿ. ಅವನ ಮುಖ ನೋಡಿದಾಗ ಪ್ರಭಾತನಿಗೆ ನೆನಪಾಯಿತು – ಅಷ್ಟೂ ದಿನ ತಮ್ಮಿಂದ ಹಣ ಪಡೆಯುತ್ತಿದ್ದ ವ್ಯಕ್ತಿ ಈತನೇ. ಮೊದಲು ಮಗ, ನಂತರ ಅಪ್ಪ ಹೀಗೆ ಇಬ್ಬರೂ ಒಬ್ಬರಾದ ನಂತರ ಒಬ್ಬರು ಕತ್ತರಿಗೆ ತಲೆಯನ್ನೊಡ್ಡಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್‌. ಶ್ರೀರಾಮ್‌ ಕತೆ “ತೇಲ್ ಮಾಲಿಶ್”

Read More

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕೂರಾಪುರಾಣ ೧೨: ಹಿಡಿ ಪ್ರೀತಿಗೆ ಹಂಬಲಿಸುತ್ತ, ಹೃದಯ ಕರಗುವಷ್ಟು ಪ್ರೀತಿಸುತ್ತ..

ಬೆನ್ನು ಸವರತೊಡಗಿದರೆ ಅಡ್ಡ ಬಿದ್ದು ಹೊಟ್ಟೆಯನ್ನು ಕೆರೆ ಎಂಬಂತೆ ಮುಂದಿನ ಎರಡು ಕಾಲುಗಳನ್ನು ಮಡಚಿದಾಗ ಮುದ್ದುಕ್ಕದೇ ಹೇಗೆ ಸಾಧ್ಯ? ಒಂದು ವೇಳೆ ನಾನು ಏಳುವುದು ತಡವಾದರೆ ನನ್ನ ಹಾಸಿಗೆಯ ಪಕ್ಕದಲ್ಲಿ ಬಂದು ಬಾಲ‌ ಅಲ್ಲಾಡಿಸುತ್ತ ಕೂತು ಬಿಡುತ್ತಿದ್ದ. ಬೆಳಿಗ್ಗೆ ಎದ್ದ ಕೂಡಲೇ ಇವನದೇ ದಿವ್ಯದರ್ಶನ. ಈಗ ಹಾಗಿಲ್ಲ, ದೊಡ್ಡವನಾಗಿದ್ದಾನೆ. ಎದ್ದು ತನ್ನ ಕೆಲಸಗಳತ್ತ ಗಮನ ಕೊಡುತ್ತಾನೆ. ಆದರೆ ಆಗಾಗ ಮೈ ಕೆರೆಸಿಕೊಳ್ಳುವುದು, ಕಿವಿಗಳನ್ನು ಮಸಾಜ್ ಮಾಡಿಸಿಕೊಳ್ಳುವುದನ್ನು ಬಿಟ್ಟಿಲ್ಲ. ನಾವಷ್ಟೇ ಅಲ್ಲ, ನಮ್ಮ ಮನೆಗೆ ಯಾರೇ ಬಂದರೂ ಅವರು ಸಹ ಅದನ್ನೆಲ್ಲ ಮಾಡಲೇಬೇಕು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ

ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ

Read More

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ