Advertisement

Category: ಸಾಹಿತ್ಯ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

Read More

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ