Advertisement

Category: ಅಂಕಣ

ಎಮರ್ಜೆನ್ಸಿನಾ… ಎಲ್ಲಿ…?

ಕೆನಡಾದಿಂದ ಅಮೇರಿಕಾಗೆ ಓಡಾಡುವ ಟ್ರಕ್ ಗಳ ಸಂಖ್ಯೆ ದೊಡ್ಡದಿದೆ. ಆರ್ಥಿಕವಾಗಿ ಕೆನಡ ಮತ್ತು ಅಮೇರಿಕಾ ಮಧ್ಯೆ ಬಹಳ ದೊಡ್ಡ ಒಡನಾಟವಿದೆ. ಪ್ರಪಂಚಕ್ಕೆ ಗೊತ್ತಿರುವಂತೆ ಅತೀ ಹೆಚ್ಚು ಕೊರೋನ ಸೊಂಕಿತರನ್ನು ಕಂಡ ದೇಶ ಅಮೇರಿಕಾ. ಹಾಗಾಗಿ ಸುಮಾರು ಒಂದು ವರ್ಷಕ್ಕಿಂತ ಜಾಸ್ತಿ ಸಮಯ ಆಮೇರಿಕಾ ಮತ್ತು ಕೆನಡಾದ ರಸ್ತೆ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಕೇವಲ ಸರಕು ಸಾಗಾಣಿಕೆಗೆ ಸಣ್ಣ ಪ್ರಮಾಣದ ಓಡಾಟ ಇತ್ತು. ಇತ್ತೀಚಿಗೆ ಎರಡೂ ದೇಶಗಳ ಮಧ್ಯೆ ಓಡಾಟ ತೆರೆಯಲಾಗಿದ್ದ ಕಾರಣ, ಟ್ರಕ್ ಚಾಲಕರಿಗೆ ಒಂದು ನಿಯಮವನ್ನು ಮಾಡಿದರು.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಜಿಂಕೆಗಳು ಕೊಲೆ ಮಾಡಬಲ್ಲವೇ?

ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…

Read More

ಸ್ಥಿರವಲ್ಲದ ಕಾಯದ ಸುತ್ತ ‘ಕಾಯಾ’ದ ಕಥಾಹಂದರ

ಸಮಂತಾ ಬೆಳೆಯುತ್ತಾ ‘ಹನಿ’ ಎನ್ನುವ ಹೆಂಗಸಿನೊಡನೆ ಸಲಿಂಗ ಸಂಬಂಧದಲ್ಲಿ ಜೊತೆಯಾಗುತ್ತಾಳೆ. ತನ್ನ ಪ್ರಿಯತಮೆ ಹನಿಯ ಕಲೆಗಳನ್ನು ಹೋಗಲಾಡಿಸಲು ಪ್ಲಾಸ್ಟಿಕ್ ಸರ್ಜರಿಗೆಂದು ಮಲೀಕನ ಹತ್ತಿರ ಬರುತ್ತಾಳೆ. ಮಲೀಕ ಹನಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ, ತಕ್ಕ ಮಟ್ಟಿಗೆ ಧಡೂತಿ ತೂಕದ ಸಮಂತಾಳಿಗೂ ಪ್ಲಾಸ್ಟಿಕ್ ಸರ್ಜರಿಗೆ ಪ್ರಚೋದಿಸಿ ಒಪ್ಪಿಸುತ್ತಾನೆ; ಸಮಂತಾಳಿಗೆ ಮೇಲಿನಿಂದ ಕೆಳಗಿನವರೆಗೂ ಕಾಸ್ಮೆಟಿಕ್ ಸರ್ಜರಿ ಮಾಡುತ್ತಾನೆ. ಸಮಂತಾಳ ಪ್ಲಾಸ್ಟಿಕ್ ಸರ್ಜರಿಯ ಹೊತ್ತಿಗೆ ಮಲೀಕ ಮತ್ತು ಸಮಂತಾ ಇಬ್ಬರೂ ಜೊತೆಗಿದ್ದು ಮದುವೆಯಾಗುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕತ್ತಲಿಗೆ ಬೆಳಕಿನ ಬೊಟ್ಟು ಇಟ್ಟಂತೆ ಇರುವ ಚಂದ್ರ..

‘ಅಸಲಿಗೆ ಇದನ್ನೇ ನಾಟಕ ಅಂದುಕೊಂಡಿದ್ದೆ. ಅಕ್ಷರ ರೂಪದಲ್ಲಿ ಇರುವಷ್ಟು ಹೊತ್ತು ಅದು ನಾಟಕವೇ. ಕೃತಿಯೇ. ಚರ್ಚಿತ ವಸ್ತುವೇ. ಆದರೆ ನಾಟಕ ಅಂದರೆ ಅಷ್ಟೇ ಅಲ್ಲ. ನಮ್ಮ ನಡುವಿನ ಮನುಷ್ಯರ ಢಾಳಾದ ಚಿತ್ರಣ ಅಕ್ಷರಗಳಲ್ಲಿ ರೂಪು ತಳೆಯುತ್ತ ಒಂದು ರೂಪು ಪಡೆಯುವುದನ್ನು ಮೊದಮೊದಲು ನಾನೂ ನಾಟಕ ಅಂತಲೇ ಅಂದುಕೊಂಡಿದ್ದೆ. ಆದರೆ ನಂತರದಲ್ಲಿ ನಾನು ಅರಿತ ಸತ್ಯ ಅಂದರೆ ಈ ಅಕ್ಷರರೂಪದ ನಾಟಕ ರಂಗದ ಮೇಲೆ ರೂಪು ತಳೆಯಬೇಕಾದ ಪೂರ್ವದಲ್ಲಿ ಒಂದು ಮಹಾನ್ ನಾಟಕದ ಅನಾವರಣ ಆಗತೊಡಗುತ್ತದೆ.’
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ದಾಂಪತ್ಯ ವ್ಯವಸ್ಥೆಯ ಕಟು ವಿಮರ್ಶೆ

ಹಾಗೆ ನೋಡಿದರೆ ಸ್ವಾತಂತ್ರ್ಯ ಚಳವಳಿ- ಮುಖ್ಯವಾಗಿ ರಾಷ್ಟ್ರೀಯತೆಯ ಉಚ್ಛ್ರಾಯದ ಸಂದರ್ಭದಲ್ಲಿ ಹೆಣ್ಣಿನ ಸ್ಥಾನಮಾನ, ಶಿಕ್ಷಣ ಮೊದಲಾದವುಗಳ ಬಗ್ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಿತು. ಕನ್ನಡದ ಮೊದಲ ಕಾದಂಬರಿಗಳಲ್ಲಿ ಮತ್ತು ಭಾರತದ ಇತರ ಭಾಷೆಗಳ ಆರಂಭದ ಕಾದಂಬರಿಗಳಲ್ಲೂ ಹೆಣ್ಣಿನ ಪ್ರಶ್ನೆ ಬಹಳ ಮುಖ್ಯವಾಗಿ ಚರ್ಚಿತವಾಯಿತು. ಹಾಗಿದ್ದರೂ ಹೆಣ್ಣಿನ ಸ್ಥಿತಿಯಲ್ಲಿ ನಿರ್ಣಾಯಕವಾದ ಬದಲಾವಾಣೆ ಯಾಕೆ ಸಾಧ್ಯವಾಗಲಿಲ್ಲ? ಸ್ವಾತಂತ್ರ್ಯ ಚಳವಳಿ ತನ್ನ ತೀವ್ರತೆಯನ್ನು ಮುಟ್ಟಿದರೂ, ರಾಷ್ಟ್ರೀಯವಾದಿ ಭಾವನೆಗಳು ಪರಾಕಾಷ್ಠೆಗೆ ತಲುಪುತ್ತಿದ್ದರೂ ಸ್ತ್ರೀ ಸ್ವಾತಂತ್ರ್ಯದ ಪ್ರಶ್ನೆ ಯಾಕೆ ಇದ್ದಕ್ಕಿದ್ದಂತೆ ಗೌಣವಾಯಿತು ಎಂಬ ಬಗ್ಗೆ ಪಾರ್ಥಾ ಚಟರ್ಜಿಯಂಥ ಚಿಂತಕರು ಆಳವಾದ ಚಿಂತನೆ ನಡೆಸಿದ್ದಾರೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ